BREAKING NEWS

ಕಾಂಗ್ರೆಸ್‌ ಇರುವಾಗ ʼಮನಿ ಹೀಸ್ಟ್ʼ ವೆಬ್‌ ಸಿರೀಸ್‌ ಯಾರಿಗೆ ಬೇಕು?; ಪ್ರಧಾನಿ ವ್ಯಂಗ್ಯ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ನಗದು ದಂಧೆ ಕುರಿತು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು 70 ವರ್ಷಗಳ ಕಾಲ ಲೂಟಿ ಹೊಡೆದ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸಂಸದರೊಬ್ಬರ ಜತೆ ನಂಟು ಹೊಂದಿರುವ ಕಂಪನಿಗಳಿಂದ ಐಟಿ ಇಲಾಖೆ 300 ಕೋಟಿ ರೂ.ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಅವರು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಬಿಜೆಪಿ ಪಕ್ಷ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಅದನ್ನು ಶೇರ್‌ ಮಾಡಿರುವ ಪ್ರಧಾನಿ ಮೋದಿ “ಭಾರತದಲ್ಲಿ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು? 70 ವರ್ಷಗಳಿಂದ ದೇಶವನ್ನು ಲೂಟಿ ಹೊಡೆದ ಹಾಗೂ ಈಗಲೂ ಲೂಟಿ ಹೊಡೆಯುತ್ತಿರುವ ಲೆಜೆಂಡರಿ ಇತಿಹಾಸ ಕಾಂಗ್ರೆಸ್‌ ಪಕ್ಷಕ್ಕಿದೆ” ಎಂದು ಜನಪ್ರಿಯ ಸೀರಿಸ್‌ನ್ನು ಉಲ್ಲೇಖಿಸುವ ಮೂಲಕ ಪಿಎಂ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದುವರೆಗೆ ವಶಪಡಿಸಿಕೊಂಡ ಒಟ್ಟು ನಗದು ಹಣದಲ್ಲಿ ಆದಾಯ ತೆರಿಗೆ ಇಲಾಖೆ ಸೋಮವಾರ ಬಲಂಗಿರ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ 284 ಕೋಟಿ ರೂ., ಸಂಬಲ್‌ಪುರದಲ್ಲಿ 37.5 ಕೋಟಿ ರೂ. ಮತ್ತು ಛತ್ತೀಸ್‌ಗಢದಲ್ಲಿ 11 ಕೋಟಿ ರೂ. ಅಕ್ರಮ ಹಣ ದೊರೆತಿದೆ.

ದೇಶವಾಸಿಗಳು ಮೊದಲು ಈ (ಕರೆನ್ಸಿ) ನೋಟುಗಳ ಬಂಡಲ್‌ಗಳನ್ನು ನೋಡಬೇಕು ಮತ್ತು ನಂತರ ಅವರ ನಾಯಕರು ಮಾಡುವ ಪ್ರಾಮಾಣಿಕತೆಯ ಭಾಷಣಗಳನ್ನು ಕೇಳಬೇಕು. ಅವರು ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ಹಿಂದಿರುಗಿಸಬೇಕಾಗುತ್ತದೆ, ಇದು ಮೋದಿಯವರ ಗ್ಯಾರಂಟಿ ಎಂದು ಪೋಸ್ಟ್‌ ಮಾಡಲಾಗಿದೆ.

ಒಡಿಶಾ, ಜಾರ್ಖಂಡ್ ಮತ್ತು ಬಂಗಾಳದಲ್ಲಿ ಹರಡಿರುವ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ಮತ್ತು ಬಲ್ದೇವ್ ಸಾಹು ಮತ್ತು ಗ್ರೂಪ್ ಆಫ್ ಕಂಪನಿಗಳ ಆವರಣದಲ್ಲಿ ನಗದು ತುಂಬಿದ ಅಲ್ಮಿರಾಗಳ ಛಾಯಾಚಿತ್ರಗಳನ್ನು ಹೊಂದಿರುವ ಪತ್ರಿಕೆಯ ವರದಿಯನ್ನು ಟ್ಯಾಗ್ ಮಾಡುವ ಮೂಲಕ ಪ್ರಧಾನಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳನ್ನು ಭ್ರಷ್ಟಾಚಾರದ ರೋಗವನ್ನು ಹರಡಿದ್ದಾರೆ, ಇದರ ವಿರುದ್ಧ ಕೇವಲ ಸರ್ಕಾರವಲ್ಲ, ದೇಶದ ಜನರು ಕೂಡ ಚಳವಳಿಯನ್ನು ಪ್ರಾರಂಭಿಸಬೇಕು” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಇಂದು ಹೇಳಿದರು.

https://x.com/narendramodi/status/1734477685865488725?s=20

andolanait

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

3 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

4 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

4 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

4 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

4 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

4 hours ago