ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ನಗದು ದಂಧೆ ಕುರಿತು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು 70 ವರ್ಷಗಳ ಕಾಲ ಲೂಟಿ ಹೊಡೆದ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸಂಸದರೊಬ್ಬರ ಜತೆ ನಂಟು ಹೊಂದಿರುವ ಕಂಪನಿಗಳಿಂದ ಐಟಿ ಇಲಾಖೆ 300 ಕೋಟಿ ರೂ.ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಅವರು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.
ಬಿಜೆಪಿ ಪಕ್ಷ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಅದನ್ನು ಶೇರ್ ಮಾಡಿರುವ ಪ್ರಧಾನಿ ಮೋದಿ “ಭಾರತದಲ್ಲಿ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು? 70 ವರ್ಷಗಳಿಂದ ದೇಶವನ್ನು ಲೂಟಿ ಹೊಡೆದ ಹಾಗೂ ಈಗಲೂ ಲೂಟಿ ಹೊಡೆಯುತ್ತಿರುವ ಲೆಜೆಂಡರಿ ಇತಿಹಾಸ ಕಾಂಗ್ರೆಸ್ ಪಕ್ಷಕ್ಕಿದೆ” ಎಂದು ಜನಪ್ರಿಯ ಸೀರಿಸ್ನ್ನು ಉಲ್ಲೇಖಿಸುವ ಮೂಲಕ ಪಿಎಂ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದುವರೆಗೆ ವಶಪಡಿಸಿಕೊಂಡ ಒಟ್ಟು ನಗದು ಹಣದಲ್ಲಿ ಆದಾಯ ತೆರಿಗೆ ಇಲಾಖೆ ಸೋಮವಾರ ಬಲಂಗಿರ್ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ 284 ಕೋಟಿ ರೂ., ಸಂಬಲ್ಪುರದಲ್ಲಿ 37.5 ಕೋಟಿ ರೂ. ಮತ್ತು ಛತ್ತೀಸ್ಗಢದಲ್ಲಿ 11 ಕೋಟಿ ರೂ. ಅಕ್ರಮ ಹಣ ದೊರೆತಿದೆ.
ದೇಶವಾಸಿಗಳು ಮೊದಲು ಈ (ಕರೆನ್ಸಿ) ನೋಟುಗಳ ಬಂಡಲ್ಗಳನ್ನು ನೋಡಬೇಕು ಮತ್ತು ನಂತರ ಅವರ ನಾಯಕರು ಮಾಡುವ ಪ್ರಾಮಾಣಿಕತೆಯ ಭಾಷಣಗಳನ್ನು ಕೇಳಬೇಕು. ಅವರು ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ಹಿಂದಿರುಗಿಸಬೇಕಾಗುತ್ತದೆ, ಇದು ಮೋದಿಯವರ ಗ್ಯಾರಂಟಿ ಎಂದು ಪೋಸ್ಟ್ ಮಾಡಲಾಗಿದೆ.
ಒಡಿಶಾ, ಜಾರ್ಖಂಡ್ ಮತ್ತು ಬಂಗಾಳದಲ್ಲಿ ಹರಡಿರುವ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ಮತ್ತು ಬಲ್ದೇವ್ ಸಾಹು ಮತ್ತು ಗ್ರೂಪ್ ಆಫ್ ಕಂಪನಿಗಳ ಆವರಣದಲ್ಲಿ ನಗದು ತುಂಬಿದ ಅಲ್ಮಿರಾಗಳ ಛಾಯಾಚಿತ್ರಗಳನ್ನು ಹೊಂದಿರುವ ಪತ್ರಿಕೆಯ ವರದಿಯನ್ನು ಟ್ಯಾಗ್ ಮಾಡುವ ಮೂಲಕ ಪ್ರಧಾನಿ ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
“ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳನ್ನು ಭ್ರಷ್ಟಾಚಾರದ ರೋಗವನ್ನು ಹರಡಿದ್ದಾರೆ, ಇದರ ವಿರುದ್ಧ ಕೇವಲ ಸರ್ಕಾರವಲ್ಲ, ದೇಶದ ಜನರು ಕೂಡ ಚಳವಳಿಯನ್ನು ಪ್ರಾರಂಭಿಸಬೇಕು” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಇಂದು ಹೇಳಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…