BREAKING NEWS

ಕಾಂಗ್ರೆಸ್‌ ಇರುವಾಗ ʼಮನಿ ಹೀಸ್ಟ್ʼ ವೆಬ್‌ ಸಿರೀಸ್‌ ಯಾರಿಗೆ ಬೇಕು?; ಪ್ರಧಾನಿ ವ್ಯಂಗ್ಯ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ನಗದು ದಂಧೆ ಕುರಿತು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು 70 ವರ್ಷಗಳ ಕಾಲ ಲೂಟಿ ಹೊಡೆದ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸಂಸದರೊಬ್ಬರ ಜತೆ ನಂಟು ಹೊಂದಿರುವ ಕಂಪನಿಗಳಿಂದ ಐಟಿ ಇಲಾಖೆ 300 ಕೋಟಿ ರೂ.ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಅವರು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಬಿಜೆಪಿ ಪಕ್ಷ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಅದನ್ನು ಶೇರ್‌ ಮಾಡಿರುವ ಪ್ರಧಾನಿ ಮೋದಿ “ಭಾರತದಲ್ಲಿ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು? 70 ವರ್ಷಗಳಿಂದ ದೇಶವನ್ನು ಲೂಟಿ ಹೊಡೆದ ಹಾಗೂ ಈಗಲೂ ಲೂಟಿ ಹೊಡೆಯುತ್ತಿರುವ ಲೆಜೆಂಡರಿ ಇತಿಹಾಸ ಕಾಂಗ್ರೆಸ್‌ ಪಕ್ಷಕ್ಕಿದೆ” ಎಂದು ಜನಪ್ರಿಯ ಸೀರಿಸ್‌ನ್ನು ಉಲ್ಲೇಖಿಸುವ ಮೂಲಕ ಪಿಎಂ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದುವರೆಗೆ ವಶಪಡಿಸಿಕೊಂಡ ಒಟ್ಟು ನಗದು ಹಣದಲ್ಲಿ ಆದಾಯ ತೆರಿಗೆ ಇಲಾಖೆ ಸೋಮವಾರ ಬಲಂಗಿರ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ 284 ಕೋಟಿ ರೂ., ಸಂಬಲ್‌ಪುರದಲ್ಲಿ 37.5 ಕೋಟಿ ರೂ. ಮತ್ತು ಛತ್ತೀಸ್‌ಗಢದಲ್ಲಿ 11 ಕೋಟಿ ರೂ. ಅಕ್ರಮ ಹಣ ದೊರೆತಿದೆ.

ದೇಶವಾಸಿಗಳು ಮೊದಲು ಈ (ಕರೆನ್ಸಿ) ನೋಟುಗಳ ಬಂಡಲ್‌ಗಳನ್ನು ನೋಡಬೇಕು ಮತ್ತು ನಂತರ ಅವರ ನಾಯಕರು ಮಾಡುವ ಪ್ರಾಮಾಣಿಕತೆಯ ಭಾಷಣಗಳನ್ನು ಕೇಳಬೇಕು. ಅವರು ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ಹಿಂದಿರುಗಿಸಬೇಕಾಗುತ್ತದೆ, ಇದು ಮೋದಿಯವರ ಗ್ಯಾರಂಟಿ ಎಂದು ಪೋಸ್ಟ್‌ ಮಾಡಲಾಗಿದೆ.

ಒಡಿಶಾ, ಜಾರ್ಖಂಡ್ ಮತ್ತು ಬಂಗಾಳದಲ್ಲಿ ಹರಡಿರುವ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ಮತ್ತು ಬಲ್ದೇವ್ ಸಾಹು ಮತ್ತು ಗ್ರೂಪ್ ಆಫ್ ಕಂಪನಿಗಳ ಆವರಣದಲ್ಲಿ ನಗದು ತುಂಬಿದ ಅಲ್ಮಿರಾಗಳ ಛಾಯಾಚಿತ್ರಗಳನ್ನು ಹೊಂದಿರುವ ಪತ್ರಿಕೆಯ ವರದಿಯನ್ನು ಟ್ಯಾಗ್ ಮಾಡುವ ಮೂಲಕ ಪ್ರಧಾನಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳನ್ನು ಭ್ರಷ್ಟಾಚಾರದ ರೋಗವನ್ನು ಹರಡಿದ್ದಾರೆ, ಇದರ ವಿರುದ್ಧ ಕೇವಲ ಸರ್ಕಾರವಲ್ಲ, ದೇಶದ ಜನರು ಕೂಡ ಚಳವಳಿಯನ್ನು ಪ್ರಾರಂಭಿಸಬೇಕು” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಇಂದು ಹೇಳಿದರು.

https://x.com/narendramodi/status/1734477685865488725?s=20

andolanait

Recent Posts

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

1 min ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

16 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

18 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

22 hours ago