BREAKING NEWS

ಕಾಂಗ್ರೆಸ್‌ ಇರುವಾಗ ʼಮನಿ ಹೀಸ್ಟ್ʼ ವೆಬ್‌ ಸಿರೀಸ್‌ ಯಾರಿಗೆ ಬೇಕು?; ಪ್ರಧಾನಿ ವ್ಯಂಗ್ಯ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ನಗದು ದಂಧೆ ಕುರಿತು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು 70 ವರ್ಷಗಳ ಕಾಲ ಲೂಟಿ ಹೊಡೆದ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸಂಸದರೊಬ್ಬರ ಜತೆ ನಂಟು ಹೊಂದಿರುವ ಕಂಪನಿಗಳಿಂದ ಐಟಿ ಇಲಾಖೆ 300 ಕೋಟಿ ರೂ.ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಅವರು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಬಿಜೆಪಿ ಪಕ್ಷ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಅದನ್ನು ಶೇರ್‌ ಮಾಡಿರುವ ಪ್ರಧಾನಿ ಮೋದಿ “ಭಾರತದಲ್ಲಿ ಕಾಂಗ್ರೆಸ್ ಪಕ್ಷ ಇರುವಾಗ ‘ಮನಿ ಹೀಸ್ಟ್’ ಫಿಕ್ಷನ್ ಯಾರಿಗೆ ಬೇಕು? 70 ವರ್ಷಗಳಿಂದ ದೇಶವನ್ನು ಲೂಟಿ ಹೊಡೆದ ಹಾಗೂ ಈಗಲೂ ಲೂಟಿ ಹೊಡೆಯುತ್ತಿರುವ ಲೆಜೆಂಡರಿ ಇತಿಹಾಸ ಕಾಂಗ್ರೆಸ್‌ ಪಕ್ಷಕ್ಕಿದೆ” ಎಂದು ಜನಪ್ರಿಯ ಸೀರಿಸ್‌ನ್ನು ಉಲ್ಲೇಖಿಸುವ ಮೂಲಕ ಪಿಎಂ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದುವರೆಗೆ ವಶಪಡಿಸಿಕೊಂಡ ಒಟ್ಟು ನಗದು ಹಣದಲ್ಲಿ ಆದಾಯ ತೆರಿಗೆ ಇಲಾಖೆ ಸೋಮವಾರ ಬಲಂಗಿರ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ 284 ಕೋಟಿ ರೂ., ಸಂಬಲ್‌ಪುರದಲ್ಲಿ 37.5 ಕೋಟಿ ರೂ. ಮತ್ತು ಛತ್ತೀಸ್‌ಗಢದಲ್ಲಿ 11 ಕೋಟಿ ರೂ. ಅಕ್ರಮ ಹಣ ದೊರೆತಿದೆ.

ದೇಶವಾಸಿಗಳು ಮೊದಲು ಈ (ಕರೆನ್ಸಿ) ನೋಟುಗಳ ಬಂಡಲ್‌ಗಳನ್ನು ನೋಡಬೇಕು ಮತ್ತು ನಂತರ ಅವರ ನಾಯಕರು ಮಾಡುವ ಪ್ರಾಮಾಣಿಕತೆಯ ಭಾಷಣಗಳನ್ನು ಕೇಳಬೇಕು. ಅವರು ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ಹಿಂದಿರುಗಿಸಬೇಕಾಗುತ್ತದೆ, ಇದು ಮೋದಿಯವರ ಗ್ಯಾರಂಟಿ ಎಂದು ಪೋಸ್ಟ್‌ ಮಾಡಲಾಗಿದೆ.

ಒಡಿಶಾ, ಜಾರ್ಖಂಡ್ ಮತ್ತು ಬಂಗಾಳದಲ್ಲಿ ಹರಡಿರುವ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ಮತ್ತು ಬಲ್ದೇವ್ ಸಾಹು ಮತ್ತು ಗ್ರೂಪ್ ಆಫ್ ಕಂಪನಿಗಳ ಆವರಣದಲ್ಲಿ ನಗದು ತುಂಬಿದ ಅಲ್ಮಿರಾಗಳ ಛಾಯಾಚಿತ್ರಗಳನ್ನು ಹೊಂದಿರುವ ಪತ್ರಿಕೆಯ ವರದಿಯನ್ನು ಟ್ಯಾಗ್ ಮಾಡುವ ಮೂಲಕ ಪ್ರಧಾನಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳನ್ನು ಭ್ರಷ್ಟಾಚಾರದ ರೋಗವನ್ನು ಹರಡಿದ್ದಾರೆ, ಇದರ ವಿರುದ್ಧ ಕೇವಲ ಸರ್ಕಾರವಲ್ಲ, ದೇಶದ ಜನರು ಕೂಡ ಚಳವಳಿಯನ್ನು ಪ್ರಾರಂಭಿಸಬೇಕು” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಇಂದು ಹೇಳಿದರು.

https://x.com/narendramodi/status/1734477685865488725?s=20

andolanait

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago