Mysore
34
few clouds

Social Media

ಶನಿವಾರ, 25 ಏಪ್ರಿಲ 2026
Light
Dark

ಯಾರಾಗಲಿದ್ದಾರೆ ಮಧ್ಯಪ್ರದೇಶದ ಸಿಎಂ?

ಪಂಚರಾಜ್ಯಗಳ ಚುನಾವಣೆ ಪಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದು ಬಹುತೇಕ ದೃಢಪಟ್ಟಿದೆ. ಮಧ್ಯಪ್ರದೇಶದ ಚುನಾವಣಾ ಫಲಿತಾಂಶದ ಜೊತೆಗೆ, ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ವಿಶ್ಲೇಷಣೆಯೂ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ.

ಮಧ್ಯ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಆದರೆ, ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ಪಕ್ಷ ಈ ವರೆಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಇದರ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಬಾರಿ ಬಿಜೆಪಿಯು ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿಯನ್ನು ಘೋಷಿಸಿಲ್ಲ. ಸಿಎಂ ಹುದ್ದೆಯ ರೇಸ್​ನಲ್ಲಿ ಚೌಹಾಣ್, ಸಿಂಧಿಯಾ ಸೇರಿ ಹಲವರ ಹೆಸರು ಕೇಳಿಬರುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ಚುನಾವಣೆಯ ಹಿನ್ನೋಟ:
2018ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿಯ ಪೈಪೋಟಿ ಏರ್ಪಟ್ಟು ಸರಳ ಬಹುಮತಕ್ಕೆ ಕೆಲವೇ ಸ್ಥಾನಗಳು ಕಾಂಗ್ರೆಸ್​ಗೆ ಕಡಿಮೆಯಾಗಿದ್ದವು. ನಂತರ ಪಕ್ಷೇತರರು ಹಾಗೂ ಇತರರ ಬೆಂಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು. ಆದರೆ, ಇದಾದ ಒಂದೂವರೆ ವರ್ಷದಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಬಂಡಾಯವೆದ್ದು, ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ನಂತರ ಬಿಜೆಪಿ ಸರ್ಕಾರ ರಚನೆಯಾಗಿ ಪುನಃ ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿ ಆಗಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!