BREAKING NEWS

ಯಾರಾಗಲಿದ್ದಾರೆ ಮಧ್ಯಪ್ರದೇಶದ ಸಿಎಂ?

ಪಂಚರಾಜ್ಯಗಳ ಚುನಾವಣೆ ಪಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದು ಬಹುತೇಕ ದೃಢಪಟ್ಟಿದೆ. ಮಧ್ಯಪ್ರದೇಶದ ಚುನಾವಣಾ ಫಲಿತಾಂಶದ ಜೊತೆಗೆ, ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ವಿಶ್ಲೇಷಣೆಯೂ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ.

ಮಧ್ಯ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಆದರೆ, ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ಪಕ್ಷ ಈ ವರೆಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಇದರ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಬಾರಿ ಬಿಜೆಪಿಯು ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿಯನ್ನು ಘೋಷಿಸಿಲ್ಲ. ಸಿಎಂ ಹುದ್ದೆಯ ರೇಸ್​ನಲ್ಲಿ ಚೌಹಾಣ್, ಸಿಂಧಿಯಾ ಸೇರಿ ಹಲವರ ಹೆಸರು ಕೇಳಿಬರುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ಚುನಾವಣೆಯ ಹಿನ್ನೋಟ:
2018ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿಯ ಪೈಪೋಟಿ ಏರ್ಪಟ್ಟು ಸರಳ ಬಹುಮತಕ್ಕೆ ಕೆಲವೇ ಸ್ಥಾನಗಳು ಕಾಂಗ್ರೆಸ್​ಗೆ ಕಡಿಮೆಯಾಗಿದ್ದವು. ನಂತರ ಪಕ್ಷೇತರರು ಹಾಗೂ ಇತರರ ಬೆಂಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು. ಆದರೆ, ಇದಾದ ಒಂದೂವರೆ ವರ್ಷದಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಬಂಡಾಯವೆದ್ದು, ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ನಂತರ ಬಿಜೆಪಿ ಸರ್ಕಾರ ರಚನೆಯಾಗಿ ಪುನಃ ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿ ಆಗಿದ್ದರು.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

42 seconds ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

3 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

12 mins ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

19 mins ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

27 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

33 mins ago