ಪಂಚರಾಜ್ಯಗಳ ಚುನಾವಣೆ ಪಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದು ಬಹುತೇಕ ದೃಢಪಟ್ಟಿದೆ. ಮಧ್ಯಪ್ರದೇಶದ ಚುನಾವಣಾ ಫಲಿತಾಂಶದ ಜೊತೆಗೆ, ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ವಿಶ್ಲೇಷಣೆಯೂ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ.
ಮಧ್ಯ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಆದರೆ, ಮುಂದಿನ ಮುಖ್ಯಮಂತ್ರಿ ಯಾರೆಂಬ ಬಗ್ಗೆ ಪಕ್ಷ ಈ ವರೆಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಇದರ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಬಾರಿ ಬಿಜೆಪಿಯು ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿಯನ್ನು ಘೋಷಿಸಿಲ್ಲ. ಸಿಎಂ ಹುದ್ದೆಯ ರೇಸ್ನಲ್ಲಿ ಚೌಹಾಣ್, ಸಿಂಧಿಯಾ ಸೇರಿ ಹಲವರ ಹೆಸರು ಕೇಳಿಬರುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಚುನಾವಣೆಯ ಹಿನ್ನೋಟ:
2018ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿಯ ಪೈಪೋಟಿ ಏರ್ಪಟ್ಟು ಸರಳ ಬಹುಮತಕ್ಕೆ ಕೆಲವೇ ಸ್ಥಾನಗಳು ಕಾಂಗ್ರೆಸ್ಗೆ ಕಡಿಮೆಯಾಗಿದ್ದವು. ನಂತರ ಪಕ್ಷೇತರರು ಹಾಗೂ ಇತರರ ಬೆಂಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು. ಆದರೆ, ಇದಾದ ಒಂದೂವರೆ ವರ್ಷದಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಬಂಡಾಯವೆದ್ದು, ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ನಂತರ ಬಿಜೆಪಿ ಸರ್ಕಾರ ರಚನೆಯಾಗಿ ಪುನಃ ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿ ಆಗಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…