BREAKING NEWS

ರೈತರು ಸುಪ್ರೀಂಕೋರ್ಟ್‌ ಗೆ ಹೋಗಬೇಕಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ?: ಬೊಮ್ಮಾಯಿ ಪ್ರಶ್ನೆ

ಬೆಂಗಳೂರು : ಕಾವೇರಿ ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂಕೊರ್ಟ್‍ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿನ್ನೆ ಡಿ.ಕೆ.ಶಿವಕುಮಾರ್ ಅವರು ಅಣೆಕಟ್ಟೆಯ ಬೀಗ ನಮ್ಮ ಕೈಯಲ್ಲಿ ಇಲ್ಲ’ ಎಂದು ಹೇಳಿದ್ದಾರೆ. ನಮ್ಮ ಅಣೆಕಟ್ಟುಗಳ ಮೇಲೆ ನಮ್ಮ ಹಕ್ಕಿದೆ. ಆದರೆ, ಇವರು ನಮ್ಮ ಹಕ್ಕನ್ನು ಬಿಟ್ಟು ಕೊಡುತ್ತಿದ್ದಾರೆ ಎಂದು ಟೀಕಿಸಿದರು.

ನಮ್ಮ ಹಕ್ಕನ್ನು ಅವರಿಗೆ ಬಿಟ್ಟು ಕೊಟ್ಟು, ತಾವು ಮಾಡಿದ ತಪ್ಪಿಗೆ, ರೈತರಿಗೆ ಸುಪ್ರೀಂ ಕೋರ್ಟಿಗೆ ಹೋಗಿ ಅಂತ ಹೇಳುತ್ತಿದ್ದಾರೆ. ರೈತರು ಸುಪ್ರೀಂಕೋರ್ಟಿಗೆ ಹೋಗಬೇಕಾದರೆ ನಿಮ್ಮನ್ನು ಯಾಕೆ ಆಯ್ಕೆ ಮಾಡಬೇಕಿತ್ತು. ಇವರು ಯಾಕೆ ಸರ್ಕಾರದಲ್ಲಿ ಅಧಿಕಾರ ಮಾಡಬೇಕು. ನೀವು ರಕ್ಷಣೆ ಮಾಡಲಿ ಅಂತಾನೆ ಜನ ನಿಮ್ಮನ್ನ ಆಯ್ಕೆ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಾವೇರಿ ಜಲಾನಯನ ಪ್ರದೇಶದ ಜನ ನಿಮಗೆ ಶಾಸಕರನ್ನು ಕೊಟ್ಟಿದ್ದಾರೆ. ಅವರು ರೈತರ ರಕ್ಷಣೆ ಮಾಡದೇ ಇದ್ದರೆ ನೀವುಗಳು ಯಾಕೆ ಬೇಕು? ಇದರಲ್ಲಿ ಏನೋ ರಾಜಕೀಯ ಹಿತಾಸಕ್ತಿ ಇದೆ ಅಂತ ಕಾಣಿಸುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಕಿಡಿಗಾರಿದರು.

ಕಾವೇರಿ ಜಲಾನಯನದ ವಿವಾದ ಹೊಸದಲ್ಲ ಟ್ರಿಬ್ಯುನಲ್ ಆದೇಶ ಆಗಿದೆ. ಯಾವ ರೈತರು ಎಷ್ಟು ಬೆಳೆ ಬೆಳೆಯಬೇಕು ಅಂತ ನಿರ್ಧಾರ ಆಗಿದೆ. ತಮಿಳುನಾಡು ರೈತರು 32 ಟಿಎಂಸಿ ನೀರು ಬಳಕೆ ಮಾಡಿಕೊಂಡು 1.80 ಲಕ್ಷ ಹೆಕ್ಟೇರ್ ಬೆಳೆ ಬೆಳೆಯಬೇಕು ಅಂತ ನಿರ್ಧಾರ ಆಗಿದೆ ಎಂದು ಅವರು ಮಾಹಿತಿ ನೀಡಿದರು.

ಆದರೆ, ಅವರು 60 ಟಿಎಂಸಿ ನೀರು ಬಳಕೆ ಮಾಡಿಕೊಂಡು 4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬೆಳೆದಿದ್ದಾರೆ. ಅದನ್ನು ನಮ್ಮ ರಾಜ್ಯ ಸರಕಾರ ಪ್ರಶ್ನಿಸಬೇಕಿದೆ. ಇವರು ಪ್ರಶ್ನೆ ಮಾಡುತ್ತಿಲ್ಲ. ನಮ್ಮ ಜಲಾಶಯದ ನೀರನ್ನು ನಮ್ಮ ರೈತರಿಗೆ ಸರಿಯಾದ ಸಮಯದಲ್ಲಿ ಬಿಡಲಿಲ್ಲ. ಈಗ ತಮಿಳುನಾಡಿನವರು ನೀರು ಕೇಳುತ್ತಿದ್ದಾರೆ. ಇದರಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.

ಯಾರೂ ಬಿಜೆಪಿ ಬಿಡುವುದಿಲ್ಲ: ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಹೋಗುತ್ತಾರೆ ಎನ್ನುವ ಮಾತು ಸತ್ಯಕ್ಕೆ ದೂರವಾದದ್ದು, ಕಾಂಗ್ರೆಸ್ ಮೇಲೆ ಕಮಿಷನ್ ಆರೋಪ ಕೇಳಿ ಬಂದಿರುವುದರಿಂದ ಅದನ್ನು ಡೈವರ್ಟ್ ಮಾಡಲು ಈ ರೀತಿಯ ಸುದ್ದಿ ಹಬ್ಬಿಸುತ್ತಿದ್ದಾರೆ. ಯಶವಂತಪುರದಲ್ಲಿ ಸ್ಥಳಿಯವಾಗಿ ಕೆಲವು ಸಮಸ್ಯೆ ಇರುವ ಬಗ್ಗೆ ನಮ್ಮ ಗಮನಕ್ಕೆ ತಂದಿದ್ದಾರೆ. ಅದನ್ನು ಪರಿಹರಿಸಲಾಗುವುದು. ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಅವರು ಹೇಳಿದರು.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

13 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

13 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

13 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

13 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago