BREAKING NEWS

ರೈತರು ಸುಪ್ರೀಂಕೋರ್ಟ್‌ ಗೆ ಹೋಗಬೇಕಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ?: ಬೊಮ್ಮಾಯಿ ಪ್ರಶ್ನೆ

ಬೆಂಗಳೂರು : ಕಾವೇರಿ ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂಕೊರ್ಟ್‍ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿನ್ನೆ ಡಿ.ಕೆ.ಶಿವಕುಮಾರ್ ಅವರು ಅಣೆಕಟ್ಟೆಯ ಬೀಗ ನಮ್ಮ ಕೈಯಲ್ಲಿ ಇಲ್ಲ’ ಎಂದು ಹೇಳಿದ್ದಾರೆ. ನಮ್ಮ ಅಣೆಕಟ್ಟುಗಳ ಮೇಲೆ ನಮ್ಮ ಹಕ್ಕಿದೆ. ಆದರೆ, ಇವರು ನಮ್ಮ ಹಕ್ಕನ್ನು ಬಿಟ್ಟು ಕೊಡುತ್ತಿದ್ದಾರೆ ಎಂದು ಟೀಕಿಸಿದರು.

ನಮ್ಮ ಹಕ್ಕನ್ನು ಅವರಿಗೆ ಬಿಟ್ಟು ಕೊಟ್ಟು, ತಾವು ಮಾಡಿದ ತಪ್ಪಿಗೆ, ರೈತರಿಗೆ ಸುಪ್ರೀಂ ಕೋರ್ಟಿಗೆ ಹೋಗಿ ಅಂತ ಹೇಳುತ್ತಿದ್ದಾರೆ. ರೈತರು ಸುಪ್ರೀಂಕೋರ್ಟಿಗೆ ಹೋಗಬೇಕಾದರೆ ನಿಮ್ಮನ್ನು ಯಾಕೆ ಆಯ್ಕೆ ಮಾಡಬೇಕಿತ್ತು. ಇವರು ಯಾಕೆ ಸರ್ಕಾರದಲ್ಲಿ ಅಧಿಕಾರ ಮಾಡಬೇಕು. ನೀವು ರಕ್ಷಣೆ ಮಾಡಲಿ ಅಂತಾನೆ ಜನ ನಿಮ್ಮನ್ನ ಆಯ್ಕೆ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಾವೇರಿ ಜಲಾನಯನ ಪ್ರದೇಶದ ಜನ ನಿಮಗೆ ಶಾಸಕರನ್ನು ಕೊಟ್ಟಿದ್ದಾರೆ. ಅವರು ರೈತರ ರಕ್ಷಣೆ ಮಾಡದೇ ಇದ್ದರೆ ನೀವುಗಳು ಯಾಕೆ ಬೇಕು? ಇದರಲ್ಲಿ ಏನೋ ರಾಜಕೀಯ ಹಿತಾಸಕ್ತಿ ಇದೆ ಅಂತ ಕಾಣಿಸುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಕಿಡಿಗಾರಿದರು.

ಕಾವೇರಿ ಜಲಾನಯನದ ವಿವಾದ ಹೊಸದಲ್ಲ ಟ್ರಿಬ್ಯುನಲ್ ಆದೇಶ ಆಗಿದೆ. ಯಾವ ರೈತರು ಎಷ್ಟು ಬೆಳೆ ಬೆಳೆಯಬೇಕು ಅಂತ ನಿರ್ಧಾರ ಆಗಿದೆ. ತಮಿಳುನಾಡು ರೈತರು 32 ಟಿಎಂಸಿ ನೀರು ಬಳಕೆ ಮಾಡಿಕೊಂಡು 1.80 ಲಕ್ಷ ಹೆಕ್ಟೇರ್ ಬೆಳೆ ಬೆಳೆಯಬೇಕು ಅಂತ ನಿರ್ಧಾರ ಆಗಿದೆ ಎಂದು ಅವರು ಮಾಹಿತಿ ನೀಡಿದರು.

ಆದರೆ, ಅವರು 60 ಟಿಎಂಸಿ ನೀರು ಬಳಕೆ ಮಾಡಿಕೊಂಡು 4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬೆಳೆದಿದ್ದಾರೆ. ಅದನ್ನು ನಮ್ಮ ರಾಜ್ಯ ಸರಕಾರ ಪ್ರಶ್ನಿಸಬೇಕಿದೆ. ಇವರು ಪ್ರಶ್ನೆ ಮಾಡುತ್ತಿಲ್ಲ. ನಮ್ಮ ಜಲಾಶಯದ ನೀರನ್ನು ನಮ್ಮ ರೈತರಿಗೆ ಸರಿಯಾದ ಸಮಯದಲ್ಲಿ ಬಿಡಲಿಲ್ಲ. ಈಗ ತಮಿಳುನಾಡಿನವರು ನೀರು ಕೇಳುತ್ತಿದ್ದಾರೆ. ಇದರಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.

ಯಾರೂ ಬಿಜೆಪಿ ಬಿಡುವುದಿಲ್ಲ: ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಹೋಗುತ್ತಾರೆ ಎನ್ನುವ ಮಾತು ಸತ್ಯಕ್ಕೆ ದೂರವಾದದ್ದು, ಕಾಂಗ್ರೆಸ್ ಮೇಲೆ ಕಮಿಷನ್ ಆರೋಪ ಕೇಳಿ ಬಂದಿರುವುದರಿಂದ ಅದನ್ನು ಡೈವರ್ಟ್ ಮಾಡಲು ಈ ರೀತಿಯ ಸುದ್ದಿ ಹಬ್ಬಿಸುತ್ತಿದ್ದಾರೆ. ಯಶವಂತಪುರದಲ್ಲಿ ಸ್ಥಳಿಯವಾಗಿ ಕೆಲವು ಸಮಸ್ಯೆ ಇರುವ ಬಗ್ಗೆ ನಮ್ಮ ಗಮನಕ್ಕೆ ತಂದಿದ್ದಾರೆ. ಅದನ್ನು ಪರಿಹರಿಸಲಾಗುವುದು. ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಅವರು ಹೇಳಿದರು.

andolanait

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

12 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

16 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

22 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

22 hours ago