ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಚುನಾವಣೆ ಪ್ರಚಾರ ಸಂದರ್ಭದಲ್ಲಿ ದೇಶ-ವಿದೇಶಗಳ ವಿಚಾರ, ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆಯೇ ವಿನಃ ಇಲ್ಲಿನ ಶೇ.40 ಕಮೀಷನ್ ಪಡೆಯುವ ಭ್ರಷ್ಟಾಚಾರದ ಸರ್ಕಾರದ ಬಗ್ಗೆ ಉತ್ತರ ನೀಡಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.
ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ, ಕೃಷಿಕರ ಸಮಸ್ಯೆ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಜನರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮೋದಿ ಅವರು ಪ್ರಸ್ತಾಪಿಸದೇ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಇಲ್ಲಿನ ಶೇ.40 ಕಮೀಷನ್ ಸರ್ಕಾರದ ಬಗ್ಗೆ ಯಾವುದೇ ಉತ್ತರ ನೀಡಿಲ್ಲ’ ಎಂದು ಟೀಕಿಸಿದರು.
ಮತದಾರರು ಸತ್ಯವನ್ನು ಅನ್ವೇಷಣೆ ಮಾಡಬೇಕು. ಬಿಜೆಪಿ ಕಳೆದ ಮೂರು ವರ್ಷದಲ್ಲಿ ಏನು ಮಾಡಿದೆ ಎಂದು ತಿಳಿದುಕೊಳ್ಳಿ. ಅಗತ್ಯ ವಸ್ತುಗಳ ಬೆಲೆ ಏರಿಕೆ ದೊಡ್ಡ ವಿಷಯವಲ್ಲವೇ, ನಿರುದ್ಯೋಗ ದೊಡ್ಡದಲ್ಲವೇ. ಸತ್ಯ ನಿಮ್ಮ ಕಣ್ಣ ಮುಂದಿದೆ. ಮೋದಿ ಅವರಿಗೆ ಚುನಾವಣಾ ವಿಷಯದ ಬಗ್ಗೆ ಮಾತನಾಡಿ ಎಂದು ಕೇಳಿಕೊಂಡರೂ ಜನರ ಬದುಕಿನ ವಿಚಾರ ಬಿಟ್ಟು ಬೇರೆ ವಿಷಯಗಳನ್ನು ಮಾತನಾಡಿದ್ದಾರೆ. ದೇಶ-ವಿದೇಶಗಳ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ’ ಎಂದು ತರಾಟೆ ತೆಗೆದುಕೊಂಡರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…