BREAKING NEWS

ಪತಿಯ ಶವದ ಮುಂದೆ ಅಳುತ್ತಲೇ ಪ್ರಾಣಬಿಟ್ಟ ಪತ್ನಿ : ಹಾಸನದಲ್ಲಿ ಹೃದಯವಿದ್ರಾವಕ ಘಟನೆ

ಹಾಸನ : ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು ನಡೆದಿದೆ.

ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್​ ಹೃದಯಾಘಾತದಿಂದ ಮೃತಪಟ್ಟಿದ್ದ. ಇಂದು ಬೆಳಗ್ಗೆ ಪತಿಯ ಶವದ ಮುಂದೆ ಅಳುತ್ತಲೇ ಪತ್ನಿ ಪ್ರಮೀಳಾ ಕೊನೆಯುಸಿರೆಳೆದಿದ್ದಾಳೆ.

ಒಂದೆಡೆ ದಂಪತಿ ಸಾವಿನಲ್ಲೂ ಒಂದಾದರೆ, ಇನ್ನೊಂದೆಡೆ  ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪಾಲಕರ ಶವಗಳ ಮುಂದೆ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ. ದಂಪತಿ ಸಾವಿಗೆ ಗ್ರಾಮಸ್ಥರು ಕೂಡ ಕಂಬನಿ ಮಿಡಿದಿದ್ದಾರೆ.

ಬೇಲೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದಂಪತಿಯ ಅಂತಿಮ ಸಂಸ್ಕಾರ ಇಂದು ನಡೆಯಲಿದೆ.

lokesh

Recent Posts

ಮಹದೇಶ್ವರ ಬೆಟ್ಟ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ತೆರೆ

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

12 mins ago

ಭಾರತೀಯ ಸೇನೆ ಬಗ್ಗೆ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆ

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…

15 mins ago

ದೊಡ್ಡಕೆರೆ, ಲಿಂಗಾಂಬುಧಿ ಕೆರೆ ಪುನರುಜ್ಜೀವನಗೊಳಿಸಿ : ಪರಿಸರ ಸಂರಕ್ಷಣಾ ವೇದಿಕೆ ಒತ್ತಾಯ

ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…

25 mins ago

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…

1 hour ago

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

2 hours ago

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

2 hours ago