ಹಾಸನ : ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು ನಡೆದಿದೆ.
ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್ ಹೃದಯಾಘಾತದಿಂದ ಮೃತಪಟ್ಟಿದ್ದ. ಇಂದು ಬೆಳಗ್ಗೆ ಪತಿಯ ಶವದ ಮುಂದೆ ಅಳುತ್ತಲೇ ಪತ್ನಿ ಪ್ರಮೀಳಾ ಕೊನೆಯುಸಿರೆಳೆದಿದ್ದಾಳೆ.
ಒಂದೆಡೆ ದಂಪತಿ ಸಾವಿನಲ್ಲೂ ಒಂದಾದರೆ, ಇನ್ನೊಂದೆಡೆ ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪಾಲಕರ ಶವಗಳ ಮುಂದೆ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ. ದಂಪತಿ ಸಾವಿಗೆ ಗ್ರಾಮಸ್ಥರು ಕೂಡ ಕಂಬನಿ ಮಿಡಿದಿದ್ದಾರೆ.
ಬೇಲೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದಂಪತಿಯ ಅಂತಿಮ ಸಂಸ್ಕಾರ ಇಂದು ನಡೆಯಲಿದೆ.
ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…
ನವದೆಹಲಿ: ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…
ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…
ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿಯ…
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…