BREAKING NEWS

ಶೀಘ್ರವೇ ಜಗತ್ತಿನೆದುರು ಕಾಣಿಸಿಕೊಳ್ಳುತ್ತೇನೆ: ಅಮೃತಪಾಲ್

ಚಂಡೀಗಡ: ನಾನು ಪಲಾಯನವಾದಿ ಅಲ್ಲ. ಜಗತ್ತಿನ ಮುಂದೆ ಶೀಘ್ರದಲ್ಲೇ ಕಾಣಿಸಿಕೊಳ್ಳುತ್ತೇನೆ ಎಂದು ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಮತ್ತೊಂದು ವಿಡಿಯೊದಲ್ಲಿ ಹೇಳಿದ್ದಾರೆ.

ನಾನು ಪರಾರಿಯಾಗಿದ್ದೇನೆ. ನನ್ನ ಸಹಚರರನ್ನು ತೊರೆದಿದ್ದೇನೆ ಎಂದು ಭಾವಿಸುವವರು ಭ್ರಮೆಯಲ್ಲಿ ಇರುತ್ತಾರೆ. ನಾನು ಸಾವಿಗೆ ಹೆದರುವುದಿಲ್ಲ ಎಂದು ಪಂಜಾಬ್ ಭಾಷೆಯಲ್ಲಿ ತಿಳಿಸಿದ್ದಾರೆ.

ನಾನು ಹಿಂದೆಯೂ ಹೆದರಿಲ್ಲ. ಇನ್ನೂ ಮುಂದೆಯೂ ಹೆದರುವುದಿಲ್ಲ ಎಂದು ಸರ್ಕಾರಕ್ಕೆ ಹೇಳಲು ಬಯಸುತ್ತೇನೆ. ಅವರು ಏನೂ ಬೇಕಾದರೂ ಮಾಡಬಹುದು. ಆದರೆ ತಲೆಮರೆಸಿಕೊಳ್ಳುವ ಬಗ್ಗೆ ನಾನು ಯೋಚಿಸುವುದಿಲ್ಲ ಎಂದು ಹೇಳಿದ್ದಾರೆ.

ಸಿಖ್ ಧರ್ಮಕ್ಕೆ ಸೇರಿದ ಎಲ್ಲರೂ ಒಗ್ಗೂಡುವ ಸಮಯವಿದು. ಸಿಖ್ ಸಂಘಟನೆಗಳಲ್ಲಿ ಏಕತೆ ಕಾಪಾಡುವಂತೆ ಜಾತೇದಾರ್‌ಗೆ (ಸಂಘಟನೆಯ ಮುಖ್ಯಸ್ಥರು) ಕರೆ ನೀಡಿದ್ದಾರೆ.

ಹಿಂದೆ ಮಾಡಿದಂತೆ ಈಗಲೂ ರಾಜಕೀಯ ಮುಂದುವರಿಸಿ ಜಾತೇದಾರ್ ಆಗುವುದರಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

34 mins ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

49 mins ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

2 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

2 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

4 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

7 hours ago