ಚಂಡೀಗಡ: ನಾನು ಪಲಾಯನವಾದಿ ಅಲ್ಲ. ಜಗತ್ತಿನ ಮುಂದೆ ಶೀಘ್ರದಲ್ಲೇ ಕಾಣಿಸಿಕೊಳ್ಳುತ್ತೇನೆ ಎಂದು ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಮತ್ತೊಂದು ವಿಡಿಯೊದಲ್ಲಿ ಹೇಳಿದ್ದಾರೆ.
ನಾನು ಪರಾರಿಯಾಗಿದ್ದೇನೆ. ನನ್ನ ಸಹಚರರನ್ನು ತೊರೆದಿದ್ದೇನೆ ಎಂದು ಭಾವಿಸುವವರು ಭ್ರಮೆಯಲ್ಲಿ ಇರುತ್ತಾರೆ. ನಾನು ಸಾವಿಗೆ ಹೆದರುವುದಿಲ್ಲ ಎಂದು ಪಂಜಾಬ್ ಭಾಷೆಯಲ್ಲಿ ತಿಳಿಸಿದ್ದಾರೆ.
ನಾನು ಹಿಂದೆಯೂ ಹೆದರಿಲ್ಲ. ಇನ್ನೂ ಮುಂದೆಯೂ ಹೆದರುವುದಿಲ್ಲ ಎಂದು ಸರ್ಕಾರಕ್ಕೆ ಹೇಳಲು ಬಯಸುತ್ತೇನೆ. ಅವರು ಏನೂ ಬೇಕಾದರೂ ಮಾಡಬಹುದು. ಆದರೆ ತಲೆಮರೆಸಿಕೊಳ್ಳುವ ಬಗ್ಗೆ ನಾನು ಯೋಚಿಸುವುದಿಲ್ಲ ಎಂದು ಹೇಳಿದ್ದಾರೆ.
ಸಿಖ್ ಧರ್ಮಕ್ಕೆ ಸೇರಿದ ಎಲ್ಲರೂ ಒಗ್ಗೂಡುವ ಸಮಯವಿದು. ಸಿಖ್ ಸಂಘಟನೆಗಳಲ್ಲಿ ಏಕತೆ ಕಾಪಾಡುವಂತೆ ಜಾತೇದಾರ್ಗೆ (ಸಂಘಟನೆಯ ಮುಖ್ಯಸ್ಥರು) ಕರೆ ನೀಡಿದ್ದಾರೆ.
ಹಿಂದೆ ಮಾಡಿದಂತೆ ಈಗಲೂ ರಾಜಕೀಯ ಮುಂದುವರಿಸಿ ಜಾತೇದಾರ್ ಆಗುವುದರಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…