ಬೆಂಗಳೂರು : ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ
ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.
ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ನುಡಿದರು.
ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.
ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಹಿರಿಯ ನಾಗರಿಕರ ಸ್ಮರಣೆ ಕೇವಲ ಈ ಒಂದು ದಿನಕ್ಕೆ ಸೀಮಿತವಾಗಬಾರದು. ಹಿರಿಯ ನಾಗರಿಕರ ಅನುಭವ ನಮಗೆಲ್ಲಾ ಸಂಪನ್ಮೂಲ ಆಗಬೇಕು ಎಂದು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ.ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ ಉಪಸ್ಥಿತರಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…