BREAKING NEWS

ಹಿರಿಯ ನಾಗರಿಕರ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ
ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ನುಡಿದರು.

ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಹಿರಿಯ ನಾಗರಿಕರ ಸ್ಮರಣೆ ಕೇವಲ ಈ ಒಂದು ದಿನಕ್ಕೆ ಸೀಮಿತವಾಗಬಾರದು. ಹಿರಿಯ ನಾಗರಿಕರ ಅನುಭವ ನಮಗೆಲ್ಲಾ ಸಂಪನ್ಮೂಲ ಆಗಬೇಕು ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ.ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ ಉಪಸ್ಥಿತರಿದ್ದರು.

andolanait

Recent Posts

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 mins ago

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

14 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

19 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago