BREAKING NEWS

ಹಿರಿಯ ನಾಗರಿಕರ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ
ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ನುಡಿದರು.

ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಹಿರಿಯ ನಾಗರಿಕರ ಸ್ಮರಣೆ ಕೇವಲ ಈ ಒಂದು ದಿನಕ್ಕೆ ಸೀಮಿತವಾಗಬಾರದು. ಹಿರಿಯ ನಾಗರಿಕರ ಅನುಭವ ನಮಗೆಲ್ಲಾ ಸಂಪನ್ಮೂಲ ಆಗಬೇಕು ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ.ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ ಉಪಸ್ಥಿತರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago