ಬೆಂಗಳೂರು: ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. ಆದರೆ “ಆರೋಗ್ಯ ಕಾರಣದಿಂದಾಗಿ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ದೇವೇಗೌಡ ‘X’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.
ದೆಹಲಿಯಲ್ಲಿ ಸೆ. 9-10 ರಂದು ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರು ಭಾಗವಹಿಸಲಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…