BREAKING NEWS

ಜಿ20 ಶೃಂಗಸಭೆಯ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ: ಎಚ್‌.ಡಿ.ದೇವೇಗೌಡ

ಬೆಂಗಳೂರು: ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. ಆದರೆ “ಆರೋಗ್ಯ ಕಾರಣದಿಂದಾಗಿ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ದೇವೇಗೌಡ ‘X’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೆಹಲಿಯಲ್ಲಿ ಸೆ. 9-10 ರಂದು ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರು ಭಾಗವಹಿಸಲಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago