ಕಲಬುರಗಿ: “ದೇವಸ್ಥಾನಕ್ಕೆ ಯಾಕೆ ಹೋಗ್ತೀರಾ? ದೇವಸ್ಥಾನಕ್ಕೆ ಹೋದ್ರೆ ನ್ಯಾಯ ಸಿಗುತ್ತಾ? ದೇವಸ್ಥಾನಕ್ಕೆ ಹೋದ್ರೆ ಜನರಿಗೆ ನೆಮ್ಮದಿ ಸಿಗುತ್ತಾ? ಸಂವಿಧಾನ ಇದೆ, ಕೋರ್ಟ್ ಇದೆ, ಸಾಕ್ಷಿ ಸಮೇತ ಬನ್ನಿ”
-ಇದು ಕಮಿಷನ್ ಕೇಳಿಲ್ಲ ಅಂದ್ರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೇವರಲ್ಲಿ ಆಣೆ ಮಾಡಲಿ ಎಂಬ ಬಿಜೆಪಿ ಮುಖಂಡ ಆರ್ ಅಶೋಕ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ತಿರುಗೇಟು.
ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನೀವು ಮಾಡುತ್ತಿರುವ ಆರೋಪಗಳಿಗೆ ಸಾಕ್ಷಿ ಇಟ್ಟು ಮಾತಾಡಿ. ನಾವು ಈ ಹಿಂದೆ ಪಿಎಸ್ ಐ ಹಗರಣದಲ್ಲಿ ಸಾಕ್ಷಿ ಇಟ್ಟು ಮಾತಾಡಿಲ್ವಾ? ಕೆಂಪಣ್ಣನವರು ಹೇಳಿದ್ದು ನಮಗೆ ಬಿಲ್ ವಿಳಂಬ ಆಗ್ತಿದೆ ಅಂತ ಅಷ್ಟೆ, ಬಿಜೆಪಿಯವರು ಸುಮ್ ಸುಮ್ನೆ ಏನೇನೋ ಮಾತಾಡ್ತಾರೆ ಎಂದು ಪ್ರೀಯಾಂಕ್ ಖರ್ಗೆ ಆರೋಪಿಸಿದರು.
ಏಮ್ಸ್ ಸ್ಥಾಪನೆಗೆ ಸಂಸದರು ಒತ್ತಡ ಹೇರಲಿ
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಅಥವಾ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸಬೇಕೆಂಬುದು ಬಹಳ ದಿನದಿಂದ ಇಲ್ಲಿನ ಜನರ ಕೂಗಿದೆ. ಈ ನಿಟ್ಟಿನಲ್ಲಿ ಪ್ರದೇಶದ ಚುನಾಯಿತ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು.
ರಾಯಚೂರು ಜಿಲ್ಲೆ ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಲ್ಲಿ ಒಂದಾಗಿದೆ. ಕಲಬುರಗಿಯಲ್ಲಿನ ಇಎಸ್ಐಸಿ ಆಸ್ಪತ್ರೆ, ರಾಯಚೂರಿನ ಓಪೆಕ್ಸ್ ಆಸ್ಪತ್ರೆ ಕಟ್ಟಡದಜಿತೆ ಸಕಲ ಮೂಲ ಸೌಕರ್ಯವಿದ್ದು, ಇದನ್ನೇ ಏಮ್ಸ್ ಗೆ ಮೇಲ್ದರ್ಜೇಗೇರಿಸಬಹುದು. ಈ ಭಾಗದ ಒಳಿತಿಗೆ ಮತ್ತು ಪ್ರಗತಿಗೆ ಸಂಸದರು ಮುಂದಾಗಬೇಕು ಎಂದರು.
ಕೆಕೆಆರ್ ಡಿಬಿ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ
ಕೆಕೆಅರ್ ಡಿಬಿಗೆ ಜಿಲ್ಲೆಯವರೇ ಆದ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರನ್ನು ನೇಮಿಸಿದಲ್ಲದೆ, ಇತರೆ 10 ಜನಪ್ರತಿನಿಧಿಗಳನ್ನು ನೇಮಿಸಿ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ತಂದಿರುವುದು ಸಂತಸವಾಗಿದೆ. ಡಾ.ಅಜಯ್ ಸಿಂಗ್ ಅವರು, ಮಂಡಳಿ ಮತ್ತು ಪ್ರದೇಶದವನ್ನು ಅಭಿವೃದ್ದಿಯತ್ತ ಮುನ್ನೆಡೆಸಲು ಸಮರ್ಥರಿದ್ದಾರೆ. ಇತ್ತೀಚೆಗೆ ಯೋಜನಾ ಸಚಿವ ಡಿ.ಸುಧಾಕರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿಂದಿನ ಸರ್ಕಾರ ಮಂಡಳಿಯ ವಿವೇಚನೆಗೆ ಶೇ.26 ರಷ್ಟು ಅನುದಾನ ನೀಡುತ್ತಿತ್ತು. ಅದನ್ನು ನಮ್ಮ ಸರ್ಕಾರ ಶೇ.96ಕ್ಕೆ ಹೆಚ್ಚಿಸಿದೆ. ಈ ಮೂಲಕ ಮಂಡಳಿ ಬಲವರ್ಧನೆಯೂ ಮಾಡಲಾಗಿದೆ ಎಂದರು.
ಇತ್ತೇಚೆಗೆ ಚಿತ್ರದುರ್ಗ, ಮೊನ್ನೆ ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿರುವ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಆರ್.ಡಿ.ಪಿ.ಆರ್. ಇಲಾಖೆಯಿಂದ ಆರ್.ಓ.ಪ್ಲ್ಯಾಂಟ್ ಸೇರಿದಂತೆ ಇತರೆ ನೀರು ಕುಡಿಯಲು ಯೋಗ್ಯ ಇರುವ ಕುರಿತು ಅಧ್ಯಯನಕ್ಕೆ “ವಾಟರ್ ಆಡಿಟ್ ಕಮಿಟಿ” ರಚಿಸಲಾಗುವುದು.
ಈ ತಂಡವು ಅಧ್ಯಯನ ನಡೆಸಿ ಒಂದು ತಿಂಗಳ ಒಳಗಾಗಿ ವರದಿ ನೀಡಲಿದೆ. ನಂತರ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಕಡೆ ಕಾಮಗಾರಿ ಕಳಪೆಯಾಗಿಲ್ಲ. ಕೆಲವು ಕಡೆ ಆಗಿದ್ದು, ಮೂರನೇ ತಂಡದಿಂದ ತನಿಖೆ ಮಾಡಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…