BREAKING NEWS

ದೇವಸ್ಥಾನಕ್ಕೆ ಹೋದ್ರೆ ನ್ಯಾಯ ಸಿಗುತ್ತಾ? ಕೋರ್ಟ್ ಇದೆ ಸಾಕ್ಷಿ ಸಮೇತ ಬನ್ನಿ: ಪ್ರಿಯಾಂಕ್ ಖರ್ಗೆ

ಕಲಬುರಗಿ: “ದೇವಸ್ಥಾನಕ್ಕೆ ಯಾಕೆ ಹೋಗ್ತೀರಾ? ದೇವಸ್ಥಾನಕ್ಕೆ ಹೋದ್ರೆ ನ್ಯಾಯ ಸಿಗುತ್ತಾ? ದೇವಸ್ಥಾನಕ್ಕೆ ಹೋದ್ರೆ ಜನರಿಗೆ ನೆಮ್ಮದಿ ಸಿಗುತ್ತಾ? ಸಂವಿಧಾನ ಇದೆ, ಕೋರ್ಟ್ ಇದೆ, ಸಾಕ್ಷಿ ಸಮೇತ ಬನ್ನಿ”

-ಇದು ಕಮಿಷನ್ ಕೇಳಿಲ್ಲ ಅಂದ್ರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೇವರಲ್ಲಿ ಆಣೆ ಮಾಡಲಿ ಎಂಬ ಬಿಜೆಪಿ ಮುಖಂಡ ಆರ್ ಅಶೋಕ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ತಿರುಗೇಟು.

ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನೀವು ಮಾಡುತ್ತಿರುವ ಆರೋಪಗಳಿಗೆ ಸಾಕ್ಷಿ ಇಟ್ಟು ಮಾತಾಡಿ. ನಾವು ಈ ಹಿಂದೆ ಪಿಎಸ್ ಐ ಹಗರಣದಲ್ಲಿ ಸಾಕ್ಷಿ ಇಟ್ಟು ಮಾತಾಡಿಲ್ವಾ? ಕೆಂಪಣ್ಣನವರು ಹೇಳಿದ್ದು ನಮಗೆ ಬಿಲ್ ವಿಳಂಬ ಆಗ್ತಿದೆ ಅಂತ ಅಷ್ಟೆ, ಬಿಜೆಪಿಯವರು ಸುಮ್ ಸುಮ್ನೆ ಏನೇನೋ ಮಾತಾಡ್ತಾರೆ ಎಂದು ಪ್ರೀಯಾಂಕ್ ಖರ್ಗೆ ಆರೋಪಿಸಿದರು.

ಏಮ್ಸ್ ಸ್ಥಾಪನೆಗೆ ಸಂಸದರು ಒತ್ತಡ ಹೇರಲಿ
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ‌ ಅಥವಾ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸಬೇಕೆಂಬುದು ಬಹಳ ದಿನದಿಂದ ಇಲ್ಲಿನ ಜನರ ಕೂಗಿದೆ. ಈ ನಿಟ್ಟಿನಲ್ಲಿ ಪ್ರದೇಶದ ಚುನಾಯಿತ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು.

ರಾಯಚೂರು ಜಿಲ್ಲೆ ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಲ್ಲಿ ಒಂದಾಗಿದೆ. ಕಲಬುರಗಿಯಲ್ಲಿನ ಇಎಸ್ಐಸಿ ಆಸ್ಪತ್ರೆ, ರಾಯಚೂರಿನ ಓಪೆಕ್ಸ್ ಆಸ್ಪತ್ರೆ ಕಟ್ಟಡದ‌ಜಿತೆ ಸಕಲ ಮೂಲ ಸೌಕರ್ಯವಿದ್ದು, ಇದನ್ನೇ ಏಮ್ಸ್ ಗೆ ಮೇಲ್ದರ್ಜೇಗೇರಿಸಬಹುದು. ಈ ಭಾಗದ ಒಳಿತಿಗೆ ಮತ್ತು ಪ್ರಗತಿಗೆ ಸಂಸದರು‌ ಮುಂದಾಗಬೇಕು ಎಂದರು.

ಕೆಕೆಆರ್ ಡಿಬಿ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ
ಕೆಕೆಅರ್ ಡಿಬಿಗೆ ಜಿಲ್ಲೆಯವರೇ ಆದ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರನ್ನು ನೇಮಿಸಿದಲ್ಲದೆ, ಇತರೆ‌ 10 ಜನಪ್ರತಿನಿಧಿಗಳನ್ನು ನೇಮಿಸಿ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ತಂದಿರುವುದು ಸಂತಸವಾಗಿದೆ. ಡಾ.ಅಜಯ್ ಸಿಂಗ್ ಅವರು, ಮಂಡಳಿ ಮತ್ತು ಪ್ರದೇಶದವನ್ನು ಅಭಿವೃದ್ದಿಯತ್ತ ಮುನ್ನೆಡೆಸಲು ಸಮರ್ಥರಿದ್ದಾರೆ. ಇತ್ತೀಚೆಗೆ ಯೋಜನಾ ಸಚಿವ ಡಿ.ಸುಧಾಕರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿಂದಿನ ಸರ್ಕಾರ ಮಂಡಳಿ‌ಯ ವಿವೇಚನೆಗೆ ಶೇ.26 ರಷ್ಟು ಅನುದಾನ ನೀಡುತ್ತಿತ್ತು. ಅದನ್ನು ನಮ್ಮ ಸರ್ಕಾರ ಶೇ.96ಕ್ಕೆ ಹೆಚ್ಚಿಸಿದೆ. ಈ ಮೂಲಕ ಮಂಡಳಿ ಬಲವರ್ಧನೆಯೂ ಮಾಡಲಾಗಿದೆ ಎಂದರು.

ವಾಟರ್ ಆಡಿಟ್ ಕಮಿಟಿ ರಚನೆ

ಇತ್ತೇಚೆಗೆ ಚಿತ್ರದುರ್ಗ, ಮೊನ್ನೆ ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿರುವ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಆರ್.ಡಿ.ಪಿ.ಆರ್. ಇಲಾಖೆಯಿಂದ ಆರ್.ಓ.ಪ್ಲ್ಯಾಂಟ್ ಸೇರಿದಂತೆ ಇತರೆ ನೀರು ಕುಡಿಯಲು ಯೋಗ್ಯ ಇರುವ ಕುರಿತು ಅಧ್ಯಯನಕ್ಕೆ “ವಾಟರ್ ಆಡಿಟ್ ಕಮಿಟಿ” ರಚಿಸಲಾಗುವುದು.

ಈ ತಂಡವು ಅಧ್ಯಯನ ನಡೆಸಿ ಒಂದು ತಿಂಗಳ ಒಳಗಾಗಿ ವರದಿ ನೀಡಲಿದೆ. ನಂತರ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಕಡೆ ಕಾಮಗಾರಿ ಕಳಪೆಯಾಗಿಲ್ಲ. ಕೆಲವು ಕಡೆ ಆಗಿದ್ದು, ಮೂರನೇ ತಂಡದಿಂದ ತನಿಖೆ ಮಾಡಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago