ಚಿತ್ರದುರ್ಗ : ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಾಮಾಚಾರ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ನಡೆದಿದೆ.
ಶನಿವಾರ ಬೆಳಗ್ಗೆ ತರಗತಿಗೆ ಬಂದ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿದ್ದ ತಲೆ ಬುರುಡೆ, ನಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ನೋಡಿ ಬೆಚ್ಚಿಬಿದ್ದಿದ್ದಾರೆ.
ಈ ಕೃತ್ಯವನ್ನು ಯಾರು ಮಾಡಿದ್ದಾರೆಂದು ತಿಳಿದುಬಂದಿಲ್ಲ. ಆದರೆ ವಾಮಾಚಾರ ಕಂಡು ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಮಾತ್ರ ಆತಂಕ ಮನೆಮಾಡಿದೆ. ಹೀಗಾಗಿ ಈ ಕೃತ್ಯ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೃತ್ಯ ನಡೆದ ಸ್ಥಳಕ್ಕೆ ತಳಕು ಠಾಣೆಯ ಪಿಎಸ್ಐ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಬೆದರಿಸಲು ವಾಮಾಚಾರ ನಡೆಸಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ. ಸದ್ಯ ಶಾಲಾ ಆವರಣದಲ್ಲಿ ಪತ್ತೆಯಾದ ತಲೆಬುರುಡೆ ಹಾಗೂ ಇತರ ವಸ್ತುಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…