BREAKING NEWS

ದೇಹದ ಕುರಿತು ನಿರ್ಧಾರ ಮಹಿಳೆಯ ಹಕ್ಕು:ಕೇರಳ ಹೈಕೋರ್ಟ್‌ ತೀರ್ಪು

ತಿರುವನಂತಪುರ : ಮಹಿಳೆ ತನ್ನ ದೇಹದ ಕುರಿತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಶಕ್ತಳು. ಅದು ಆಕೆಯ ಸಮಾನತೆ ಹಾಗೂ ಖಾಸಗಿತನದ ಮೂಲಭೂತ ಹಕ್ಕು. ನಗ್ನತೆ ಹಾಗೂ ಲೈಂಗಿಕತೆಯನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದ್ದು ಮಹಿಳಾ ಹಕ್ಕುಗಳ ಕಾರ್ಯಕರ್ತೆ ರೆಹಾನಾ ಫಾತಿಮಾ ವಿರುದ್ಧದ ಪೊಕ್ಸೊ ಪ್ರಕರಣವನ್ನು ವಜಾಗೊಳಿಸಿದೆ. 

ಪುರುಷರು ತಮ್ಮ ದೇಹದ ಮೇಲ್ಭಾಗವನ್ನು ಪ್ರದರ್ಶಿಸುವುದು ನಗ್ನತೆಯಾಗಿ ಕಾಣುವುದಿಲ್ಲ. ಅದೇ ಮಹಿಳೆಯ ವಿಚಾರದಲ್ಲಿ ಇದು ವಿರುದ್ಧವಾಗಿರುತ್ತದೆ. ಪ್ರತಿಯೊಬ್ಬರೂ ತನ್ನ ದೇಹದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಂವಿಧಾನದಲ್ಲಿಯೇ ಅವಕಾಶ ಇರುವುದರಿಂದ ದ್ವಿಮುಖ ನೀತಿ ಸರಿಯಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಹೀಗಾಗಿ ಸಾಮಾಜಿಕ ಹೋರಾಟಗಾರ್ತಿ ವಿರುದ್ಧ ದಾಖಲಾಗಿದ್ದ ಮೊಕದ್ದಮೆಯನ್ನು ಕೇರಳ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣ ಏನು? ರೆಹಾನಾ 2020ರ ಜೂನ್ 19ರಂದು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಬಾಡಿ ಆರ್ಟ್ಸ್ ಪಾಲಿಟಿಕ್ಸ್ (#BodyArtPolitics) ಎಂಬ ಶೀರ್ಷಿಕೆಯಲ್ಲಿ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ಮಹಿಳೆಯರು ಲೈಂಗಿಕತೆ ಮತ್ತು ಅವರ ದೇಹದ ಬಗ್ಗೆ ಮುಕ್ತವಾಗಿರಬೇಕು ಎಂದು ಪುನರುಚ್ಚರಿಸುವುದಕ್ಕಾಗಿ ಈ ವಿಡಿಯೋವನ್ನು ಮಾಡಿದ್ದಾಗಿ ಅವರು ಹೇಳಿದ್ದರು.

ಸೌಂದರ್ಯವು ನೋಡುಗನ ಕಣ್ಣಿನಲ್ಲಿರುವಂತೆಯೇ, ಅಶ್ಲೀಲತೆ ನೋಡುವವರ ದೃಷ್ಟಿಯಲ್ಲಿದೆ ಎಂದು ರೆಹನಾ ಬರೆದುಕೊಂಡಿದ್ದರು. ಕೇರಳ ಪೊಲೀಸರು ರೆಹಾನಾ ವಿರುದ್ಧ ಪೋಕ್ಸೊ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದರು. ಬಿಎಸ್ಎನ್ಎಲ್ ಮಾಜಿ ಉದ್ಯೋಗಿ ರೆಹಾನಾಗೆ ವಿವಾದ ಹೊಸದೇನಲ್ಲ. ಅಯ್ಯಪ್ಪ ಭಕ್ತರ ನಂಬಿಕೆಗೆ ನೋವುಂಟು ಮಾಡುವ ಫೇಸ್ಬುಕ್ ಪೋಸ್ಟ್ ಹಾಕಿದ ಆರೋಪದಲ್ಲಿ ಈ ಹಿಂದೆ ಬಂಧಿತರಾಗಿ 18 ದಿನ ಜೈಲುವಾಸ ಅನುಭವಿಸಿದ್ದರು.

lokesh

Recent Posts

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

9 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

56 mins ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

1 hour ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

3 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

3 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

4 hours ago