ತಿರುವನಂತಪುರ : ಮಹಿಳೆ ತನ್ನ ದೇಹದ ಕುರಿತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಶಕ್ತಳು. ಅದು ಆಕೆಯ ಸಮಾನತೆ ಹಾಗೂ ಖಾಸಗಿತನದ ಮೂಲಭೂತ ಹಕ್ಕು. ನಗ್ನತೆ ಹಾಗೂ ಲೈಂಗಿಕತೆಯನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದ್ದು ಮಹಿಳಾ ಹಕ್ಕುಗಳ ಕಾರ್ಯಕರ್ತೆ ರೆಹಾನಾ ಫಾತಿಮಾ ವಿರುದ್ಧದ ಪೊಕ್ಸೊ ಪ್ರಕರಣವನ್ನು ವಜಾಗೊಳಿಸಿದೆ.
ಪುರುಷರು ತಮ್ಮ ದೇಹದ ಮೇಲ್ಭಾಗವನ್ನು ಪ್ರದರ್ಶಿಸುವುದು ನಗ್ನತೆಯಾಗಿ ಕಾಣುವುದಿಲ್ಲ. ಅದೇ ಮಹಿಳೆಯ ವಿಚಾರದಲ್ಲಿ ಇದು ವಿರುದ್ಧವಾಗಿರುತ್ತದೆ. ಪ್ರತಿಯೊಬ್ಬರೂ ತನ್ನ ದೇಹದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಂವಿಧಾನದಲ್ಲಿಯೇ ಅವಕಾಶ ಇರುವುದರಿಂದ ದ್ವಿಮುಖ ನೀತಿ ಸರಿಯಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಹೀಗಾಗಿ ಸಾಮಾಜಿಕ ಹೋರಾಟಗಾರ್ತಿ ವಿರುದ್ಧ ದಾಖಲಾಗಿದ್ದ ಮೊಕದ್ದಮೆಯನ್ನು ಕೇರಳ ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣ ಏನು? ರೆಹಾನಾ 2020ರ ಜೂನ್ 19ರಂದು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಬಾಡಿ ಆರ್ಟ್ಸ್ ಪಾಲಿಟಿಕ್ಸ್ (#BodyArtPolitics) ಎಂಬ ಶೀರ್ಷಿಕೆಯಲ್ಲಿ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ಮಹಿಳೆಯರು ಲೈಂಗಿಕತೆ ಮತ್ತು ಅವರ ದೇಹದ ಬಗ್ಗೆ ಮುಕ್ತವಾಗಿರಬೇಕು ಎಂದು ಪುನರುಚ್ಚರಿಸುವುದಕ್ಕಾಗಿ ಈ ವಿಡಿಯೋವನ್ನು ಮಾಡಿದ್ದಾಗಿ ಅವರು ಹೇಳಿದ್ದರು.
ಸೌಂದರ್ಯವು ನೋಡುಗನ ಕಣ್ಣಿನಲ್ಲಿರುವಂತೆಯೇ, ಅಶ್ಲೀಲತೆ ನೋಡುವವರ ದೃಷ್ಟಿಯಲ್ಲಿದೆ ಎಂದು ರೆಹನಾ ಬರೆದುಕೊಂಡಿದ್ದರು. ಕೇರಳ ಪೊಲೀಸರು ರೆಹಾನಾ ವಿರುದ್ಧ ಪೋಕ್ಸೊ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದರು. ಬಿಎಸ್ಎನ್ಎಲ್ ಮಾಜಿ ಉದ್ಯೋಗಿ ರೆಹಾನಾಗೆ ವಿವಾದ ಹೊಸದೇನಲ್ಲ. ಅಯ್ಯಪ್ಪ ಭಕ್ತರ ನಂಬಿಕೆಗೆ ನೋವುಂಟು ಮಾಡುವ ಫೇಸ್ಬುಕ್ ಪೋಸ್ಟ್ ಹಾಕಿದ ಆರೋಪದಲ್ಲಿ ಈ ಹಿಂದೆ ಬಂಧಿತರಾಗಿ 18 ದಿನ ಜೈಲುವಾಸ ಅನುಭವಿಸಿದ್ದರು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…