ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದಹಿರಿಯ ನಾಯಕಿ ಅತಿಶಿ ಆರೋಪಿಸಿದ್ದಾರೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಿದ್ದು, ಪಕ್ಷಗಳ ನಡುವೆ ಒಮ್ಮತದ ಕೊರತೆಯಿಂದಾಗಿ ಕಳೆದ 27 ವರ್ಷಗಳಿಂದ ಬಾಕಿ ಉಳಿದಿರುವ ಮಸೂದೆಗೆ ಮರು ಜೀವ ನೀಡಲಾಗಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಬಿಜೆಪಿಗೆ ಮಹಿಳೆಯರ ಯೋಗಕ್ಷೇಮ ಮತ್ತು ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಮಸೂದೆಯ ನಿಬಂಧನೆಗಳನ್ನು ಸೂಕ್ಷ್ಮವಾಗಿ ಓದಿದರೆ ಅದು ಮಹಿಳಾ ಬೇವಕೂಫ್ ಬನಾವೋ ಮಸೂದೆ ಎಂದು ತೋರಿಸುತ್ತದೆ” ಎಂದು ಎಎಪಿ ನಾಯಕಿ ಕಿಡಿ ಕಾರಿದ್ದಾರೆ.
ಡಿಲಿಮಿಟೇಶನ್ ಮತ್ತು ಜನಗಣತಿಯ ನಿಬಂಧನೆಗಳನ್ನು ಏಕೆ ಸೇರಿಸಲಾಗಿದೆ? ಇದರರ್ಥ 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಹಿಳಾ ಮೀಸಲಾತಿ ಜಾರಿಗೊಳಿಸಲಾಗುವುದಿಲ್ಲ. ನಾವು ಡಿಲಿಮಿಟೇಶನ್ ಮತ್ತು ಜನಗಣತಿಯ ನಿಬಂಧನೆಗಳನ್ನು ತೆಗೆದು ಹಾಕಬೇಕು ಮತ್ತು 2024 ರ ಲೋಕಸಭೆ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ದೆಹಲಿ ಸಚಿವೆ ಅತಿಶಿ ಅವರು ಹೇಳಿದ್ದಾರೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…