ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದಹಿರಿಯ ನಾಯಕಿ ಅತಿಶಿ ಆರೋಪಿಸಿದ್ದಾರೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಿದ್ದು, ಪಕ್ಷಗಳ ನಡುವೆ ಒಮ್ಮತದ ಕೊರತೆಯಿಂದಾಗಿ ಕಳೆದ 27 ವರ್ಷಗಳಿಂದ ಬಾಕಿ ಉಳಿದಿರುವ ಮಸೂದೆಗೆ ಮರು ಜೀವ ನೀಡಲಾಗಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಬಿಜೆಪಿಗೆ ಮಹಿಳೆಯರ ಯೋಗಕ್ಷೇಮ ಮತ್ತು ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಮಸೂದೆಯ ನಿಬಂಧನೆಗಳನ್ನು ಸೂಕ್ಷ್ಮವಾಗಿ ಓದಿದರೆ ಅದು ಮಹಿಳಾ ಬೇವಕೂಫ್ ಬನಾವೋ ಮಸೂದೆ ಎಂದು ತೋರಿಸುತ್ತದೆ” ಎಂದು ಎಎಪಿ ನಾಯಕಿ ಕಿಡಿ ಕಾರಿದ್ದಾರೆ.
ಡಿಲಿಮಿಟೇಶನ್ ಮತ್ತು ಜನಗಣತಿಯ ನಿಬಂಧನೆಗಳನ್ನು ಏಕೆ ಸೇರಿಸಲಾಗಿದೆ? ಇದರರ್ಥ 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಹಿಳಾ ಮೀಸಲಾತಿ ಜಾರಿಗೊಳಿಸಲಾಗುವುದಿಲ್ಲ. ನಾವು ಡಿಲಿಮಿಟೇಶನ್ ಮತ್ತು ಜನಗಣತಿಯ ನಿಬಂಧನೆಗಳನ್ನು ತೆಗೆದು ಹಾಕಬೇಕು ಮತ್ತು 2024 ರ ಲೋಕಸಭೆ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ದೆಹಲಿ ಸಚಿವೆ ಅತಿಶಿ ಅವರು ಹೇಳಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…