BREAKING NEWS

ಭಾರತ ವಿಶ್ವಕಪ್ ಗೆದ್ದರೆ ಕೊಹ್ಲಿ, ಅಶ್ವಿನ್‌ ಹೆಸರಿನಲ್ಲಿ ನಿರ್ಮಾಣವಾಗಲಿದೆ ಯಾವುದೇ ಭಾರತೀಯ ಮಾಡಿರದ ದಾಖಲೆ!

ಇಂದು ( ನವೆಂಬರ್‌ 19 ) ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಬಹು ನಿರೀಕ್ಷಿತ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ನ ಫೈನಲ್‌ ಸೆಣಸಾಟ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನೂ ಸಹ ಸೋಲದ ಟೀಮ್‌ ಇಂಡಿಯಾಗೆ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿರುವ ಬಲಿಷ್ಟ ಆಸ್ಟ್ರೇಲಿಯಾ ಎದುರಾಳಿಯಾಗಿರುವುದು ಪಂದ್ಯದ ಮೇಲಿನ ಕುತೂಹಲವನ್ನು ದುಪ್ಪಟ್ಟು ಮಾಡಿದೆ.

ಎರಡೂ ತಂಡಗಳೂ ಸಹ ಬಲಿಷ್ಟತೆಯಿಂದ ಕೂಡಿದ್ದು ಯಾವ ತಂಡ ಗೆದ್ದು ಟ್ರೋಫಿ ಎತ್ತಿ ಹಿಡಿಯಲಿದೆ ಎಂಬುದು ಇಂದು ರಾತ್ರಿ ತಿಳಿಯಲಿದ್ದು, ಪಂದ್ಯ ಮುಗಿದ ಬಳಿಕ ಸಾಕಷ್ಟು ದಾಖಲೆಗಳು ನಿರ್ಮಾಣವಾಗಲಿವೆ. ಅದರಲ್ಲಿಯೂ ಟೀಮ್‌ ಇಂಡಿಯಾ ಚಾಂಪಿಯನ್‌ ಆಗಿ ಹೊರಹೊಮ್ಮಿದರೆ ವಿರಾಟ್‌ ಕೊಹ್ಲಿ ಹಾಗೂ ರವಿಚಂದ್ರನ್‌ ಅಶ್ವಿನ್‌ ಹೆಸರಿನಲ್ಲಿ ಇಲ್ಲಿಯವರೆಗೂ ಯಾವುದೇ ಭಾರತೀಯನೂ ಸಹ ಮಾಡಿರದ ದಾಖಲೆ ನಿರ್ಮಾಣವಾಗಲಿದೆ.

ಹೌದು, ಭಾರತ ವಿಶ್ವಕಪ್‌ ಗೆದ್ದರೆ ವಿರಾಟ್‌ ಕೊಹ್ಲಿ ಹಾಗೂ ರವಿಚಂದ್ರನ್‌ ಅಶ್ವಿನ್‌ ಎರಡು ಬಾರಿ ವಿಶ್ವಕಪ್‌ ಗೆದ್ದ ಭಾರತೀಯ ಆಟಗಾರರು ಎಂಬ ದಾಖಲೆ ನಿರ್ಮಿಸಲಿದ್ದಾರೆ. 2011ರ ವಿಶ್ವಕಪ್‌ನಲ್ಲಿ ಭಾರತ ಚಾಂಪಿಯನ್ ಆಗಿದ್ದಾಗ ತಂಡದಲ್ಲಿದ್ದ ಆಟಗಾರರ ಪೈಕಿ ಕೊಹ್ಲಿ ಹಾಗೂ ಅಶ್ವಿನ್‌ ಮಾತ್ರ ಈ ಬಾರಿಯ ವಿಶ್ವಕಪ್‌ನಲ್ಲಿಯೂ ಆಡಿದ್ದು ಈ ದಾಖಲೆ ನಿರ್ಮಿಸಲು ಅರ್ಹರಾಗಿದ್ದಾರೆ.

ಇನ್ನು ವಿರಾಟ್‌ ಕೊಹ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ ಈಗಾಗಲೇ ಬೃಹತ್‌ ದಾಖಲೆಗಳನ್ನು ನಿರ್ಮಿಸಿದ್ದು ಭಾರತ ಇಂದು ಗೆದ್ದರೆ ಈ ದಾಖಲೆಯೂ ಸಹ ಕಿಂಗ್‌ ಹೆಸರಿಗೆ ಸೇರಲಿದೆ.

andolana

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

23 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

32 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

33 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

1 hour ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

2 hours ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago