BREAKING NEWS

ಭಾರತ ವಿಶ್ವಕಪ್ ಗೆದ್ದರೆ ಕೊಹ್ಲಿ, ಅಶ್ವಿನ್‌ ಹೆಸರಿನಲ್ಲಿ ನಿರ್ಮಾಣವಾಗಲಿದೆ ಯಾವುದೇ ಭಾರತೀಯ ಮಾಡಿರದ ದಾಖಲೆ!

ಇಂದು ( ನವೆಂಬರ್‌ 19 ) ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಬಹು ನಿರೀಕ್ಷಿತ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ನ ಫೈನಲ್‌ ಸೆಣಸಾಟ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನೂ ಸಹ ಸೋಲದ ಟೀಮ್‌ ಇಂಡಿಯಾಗೆ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿರುವ ಬಲಿಷ್ಟ ಆಸ್ಟ್ರೇಲಿಯಾ ಎದುರಾಳಿಯಾಗಿರುವುದು ಪಂದ್ಯದ ಮೇಲಿನ ಕುತೂಹಲವನ್ನು ದುಪ್ಪಟ್ಟು ಮಾಡಿದೆ.

ಎರಡೂ ತಂಡಗಳೂ ಸಹ ಬಲಿಷ್ಟತೆಯಿಂದ ಕೂಡಿದ್ದು ಯಾವ ತಂಡ ಗೆದ್ದು ಟ್ರೋಫಿ ಎತ್ತಿ ಹಿಡಿಯಲಿದೆ ಎಂಬುದು ಇಂದು ರಾತ್ರಿ ತಿಳಿಯಲಿದ್ದು, ಪಂದ್ಯ ಮುಗಿದ ಬಳಿಕ ಸಾಕಷ್ಟು ದಾಖಲೆಗಳು ನಿರ್ಮಾಣವಾಗಲಿವೆ. ಅದರಲ್ಲಿಯೂ ಟೀಮ್‌ ಇಂಡಿಯಾ ಚಾಂಪಿಯನ್‌ ಆಗಿ ಹೊರಹೊಮ್ಮಿದರೆ ವಿರಾಟ್‌ ಕೊಹ್ಲಿ ಹಾಗೂ ರವಿಚಂದ್ರನ್‌ ಅಶ್ವಿನ್‌ ಹೆಸರಿನಲ್ಲಿ ಇಲ್ಲಿಯವರೆಗೂ ಯಾವುದೇ ಭಾರತೀಯನೂ ಸಹ ಮಾಡಿರದ ದಾಖಲೆ ನಿರ್ಮಾಣವಾಗಲಿದೆ.

ಹೌದು, ಭಾರತ ವಿಶ್ವಕಪ್‌ ಗೆದ್ದರೆ ವಿರಾಟ್‌ ಕೊಹ್ಲಿ ಹಾಗೂ ರವಿಚಂದ್ರನ್‌ ಅಶ್ವಿನ್‌ ಎರಡು ಬಾರಿ ವಿಶ್ವಕಪ್‌ ಗೆದ್ದ ಭಾರತೀಯ ಆಟಗಾರರು ಎಂಬ ದಾಖಲೆ ನಿರ್ಮಿಸಲಿದ್ದಾರೆ. 2011ರ ವಿಶ್ವಕಪ್‌ನಲ್ಲಿ ಭಾರತ ಚಾಂಪಿಯನ್ ಆಗಿದ್ದಾಗ ತಂಡದಲ್ಲಿದ್ದ ಆಟಗಾರರ ಪೈಕಿ ಕೊಹ್ಲಿ ಹಾಗೂ ಅಶ್ವಿನ್‌ ಮಾತ್ರ ಈ ಬಾರಿಯ ವಿಶ್ವಕಪ್‌ನಲ್ಲಿಯೂ ಆಡಿದ್ದು ಈ ದಾಖಲೆ ನಿರ್ಮಿಸಲು ಅರ್ಹರಾಗಿದ್ದಾರೆ.

ಇನ್ನು ವಿರಾಟ್‌ ಕೊಹ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ ಈಗಾಗಲೇ ಬೃಹತ್‌ ದಾಖಲೆಗಳನ್ನು ನಿರ್ಮಿಸಿದ್ದು ಭಾರತ ಇಂದು ಗೆದ್ದರೆ ಈ ದಾಖಲೆಯೂ ಸಹ ಕಿಂಗ್‌ ಹೆಸರಿಗೆ ಸೇರಲಿದೆ.

andolana

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

56 mins ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

1 hour ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

2 hours ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

3 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago