BREAKING NEWS

ವಿಶ್ವಕಪ್‌: ಫೈನಲ್‌ ಪಂದ್ಯದಲ್ಲಿ ನಮಗೆ ಇದೇ ದೊಡ್ಡ ಸವಾಲು ಎಂದ ಆಸೀಸ್‌ ನಾಯಕ!

ನಾಳೆ ( ನವೆಂಬರ್‌ 19 ) ಬಹು ನಿರೀಕ್ಷಿತ ವಿಶ್ವಕಪ್‌ ಫೈನಲ್‌ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದ್ದು ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್‌ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಏಕದಿನ ವಿಶ್ವಕಪ್‌ ಫೈನಲ್‌ ಆಡಿರುವ ಆಸ್ಟ್ರೇಲಿಯಾ ವಿರುದ್ಧ ಈ ಬಾರಿಯ ಟೂರ್ನಿಯಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ಟೀಮ್‌ ಇಂಡಿಯಾ ಕಣಕ್ಕಿಳಿಯಲಿದೆ.

ಲೀಗ್‌ ಹಂತದಲ್ಲಿನ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದ ಭಾರತ ತಂಡ ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಬಲಿಷ್ಟ ನ್ಯೂಜಿಲೆಂಡ್‌ ತಂಡದ ವಿರುದ್ಧ 70 ರನ್‌ಗಳ ಜಯ ಸಾಧಿಸುವುದರ ಮೂಲಕ ಟೂರ್ನಿಯ ಕೊನೆಯ ಸೆಣಸಾಟಕ್ಕೆ ಲಗ್ಗೆ ಇಟ್ಟಿದೆ.

ಇನ್ನು ಐದು ಬಾರಿ ಟ್ರೋಫಿಯನ್ನು ಎತ್ತಿ ಹಿಡಿದಿರುವ ಆಸ್ಟ್ರೇಲಿಯಾ ಈ ಬಾರಿಯ ಟೂರ್ನಿಯ ಆರಂಭದಲ್ಲಿ ಎಡವಿತ್ತಾದರೂ ನಂತರದ ಪಂದ್ಯಗಳಲ್ಲಿ ಗೆದ್ದು ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸುವುದರ ಮೂಲಕ ಫೈನಲ್‌ ಪ್ರವೇಶ ಪಡೆದುಕೊಂಡಿತ್ತು.

ಹೀಗೆ ವಿಶ್ವ ಕ್ರಿಕೆಟ್‌ನ ಎರಡು ಬಲಿಷ್ಟ ತಂಡಗಳ ನಡುವೆ ಈ ಬಾರಿಯ ಟೂರ್ನಿಯ ಫೈನಲ್‌ ಪಂದ್ಯ ನಡೆಯಲಿರುವುದು ಭಾರೀ ಕುತೂಹಲವನ್ನು ಹುಟ್ಟುಹಾಕಿದ್ದು ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎಂಬುದು ನಾಳೆ ತಿಳಿಯಲಿದೆ. ಒಂದೆಡೆ ಎರಡೂ ತಂಡಗಳ ನಡುವಿನ ಅಭಿಮಾನಿಗಳ ಮನದಲ್ಲಿ ಪಂದ್ಯದ ಕುರಿತು ಕಾತುರತೆ ಜತೆಗೆ ಭಯ ಮೂಡಿದ್ದರೆ ಮತ್ತೊಂದೆಡೆ ಕಣಕ್ಕಿಳಿಯಲಿರುವ ಆಟಗಾರರಲ್ಲಿ ಸಹಜವಾಗಿಯೇ ಒತ್ತಡ ಹೆಚ್ಚಾಗಿದೆ.

ಅದರಲ್ಲಿಯೂ ಇತ್ತಂಡಗಳ ನಾಯಕರು ಈ ಮಹಾ ಕದನಕ್ಕೆ ವಿಶೇಷ ತಂತ್ರಗಳನ್ನು ಹೆಣೆಯುವಲ್ಲಿ ನಿರತರಾಗಿದ್ದು ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಫೈನಲ್‌ ಪಂದ್ಯ ಆಡುವುದು ತಮಗೆ ಯಾವ ರೀತಿಯ ಸವಾಲಾಗಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.

“ಟೀಮ್‌ ಇಂಡಿಯಾ ಎಲ್ಲಾ ವರ್ಗದಲ್ಲಿಯೂ ಬಲಿಷ್ಟತೆಯಿಂದ ಕೂಡಿರುವ ತಂಡವಾಗಿದೆ. ಇಂಥ ತಂಡದ ಜತೆ ಒಂದು ಲಕ್ಷ ಜನರ ಮುಂದೆ ಸೆಣಸಾಡುವುದು ನಮಗೆ ನಿಜಕ್ಕೂ ದೊಡ್ಡ ಸವಾಲಾಗಿದೆ” ಎಂದು ಪ್ಯಾಟ್‌ ಕಮಿನ್ಸ್‌ ಹೇಳಿಕೆ ನೀಡಿದ್ದಾರೆ. ಹೌದು, 132000 ಪ್ರೇಕ್ಷಕರು ಪಂದ್ಯ ವೀಕ್ಷಿಸಬಹುದಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತದ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಲಿದ್ದು, ಅವರ ಚೀರಾಟ ಹಾಗೂ ಭಾರತ ತಂಡಕ್ಕೆ ಅವರು ಕೊಡುವ ಬೆಂಬಲ ಆಸ್ಟ್ರೇಲಿಯಾ ತಂಡದ ಮೇಲೆ ಒತ್ತಡ ಹೇರುವುದು ಸುಳ್ಳಲ್ಲ.

andolana

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago