BREAKING NEWS

ವಿಶ್ವಕಪ್ ಸೆಮೀಸ್‌: ಆಸ್ಟ್ರೇಲಿಯಾಗೆ 213 ರನ್‌ಗಳ ಗುರಿ ನೀಡಿದ ದ.ಆಫ್ರಿಕಾ; ಯಾರಾಗ್ತಾರೆ ಭಾರತಕ್ಕೆ ಎದುರಾಳಿ?

ಇಂದು ( ನವೆಂಬರ್‌ 16 ) ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿರುವ ದಕ್ಷಿಣ ಆಫ್ರಿಕಾ 49.4 ಓವರ್‌ಗಳಲ್ಲಿ 212 ರನ್‌ಗಳಿಗೆ ಆಲ್‌ಔಟ್‌ ಆಗಿ ಆಸ್ಟ್ರೇಲಿಯಾಗೆ ಗೆಲ್ಲಲು 213 ರನ್‌ಗಳ ಗುರಿಯನ್ನು ನೀಡಿದೆ.

ಈ ಬಾರಿಯ ಟೂರ್ನಿಯ ಲೀಗ್‌ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಅಚ್ಚರಿಪಡಿಸಿದ್ದ ಸೌತ್‌ ಆಫ್ರಿಕಾ ಈ ಪಂದ್ಯದಲ್ಲಿ ನಿರೀಕ್ಷಿಸಿದ ಪ್ರದರ್ಶನ ನೀಡುವಲ್ಲಿ ವಿಫಲಗೊಂಡಿದೆ. ತಂಡದ ಟಾಪ್‌ ಆರ್ಡರ್‌ ಬ್ಯಾಟ್ಸ್‌ಮನ್‌ಗಳು ವಿಫಲರಾದ ಕಾರಣ ತಂಡ ದೊಡ್ಡ ಮೊತ್ತ ಪೇರಿಸುವಲ್ಲಿ ಎಡವಿದೆ.

ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್‌ ಡಿ ಕಾಕ್‌ 3 ರನ್‌ ಗಳಿಸಿ ಔಟ್‌ ಆದರೆ, ನಾಯಕ ತೆಂಬಾ ಬವುಮಾ ಶೂನ್ಯಕ್ಕೆ ಪೆವಿಲಿಯನ್‌ ಸೇರಿಕೊಂಡರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಸ್ಸಿ ವಾನ್‌ಡರ್‌ ಡಸನ್‌ 6 ರನ್‌ ಗಳಿಸಿದರು, ಏಡನ್‌ ಮಾರ್ಕ್ರಮ್‌ 10 ರನ್‌ ಗಳಿಸಿ ನಿರಾಸೆ ಮೂಡಿಸಿದರು. ಹೀಗೆ ಕೇವಲ 24 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಹೀನಾಯ ಸ್ಥಿತಿ ತಲುಪಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಐದನೇ ವಿಕೆಟ್‌ಗೆ ಜತೆಯಾದ ಹೈನ್‌ರಿಚ್‌ ಕ್ಲಾಸೀನ್‌ ಹಾಗೂ ಡೇವಿಡ್‌ ಮಿಲ್ಲರ್‌ ಆಸರೆಯಾದರು. ಕ್ಲಾಸೀನ್‌ 47 ರನ್‌ ಗಳಿಸಿದರೆ, ಡೇವಿಡ್‌ ಮಿಲ್ಲರ್‌ 101 ರನ್‌ ಗಳಿಸಿ ದಕ್ಷಿಣ ಆಫ್ರಿಕಾವನ್ನು ತೀವ್ರ ಮುಖಭಂಗದಿಂದ ಪಾರು ಮಾಡಿದರು. ಉಳಿದಂತೆ ಮಾರ್ಕೊ ಯಾನ್‌ಸೆನ್‌ ಶೂನ್ಯ, ಗೆರಾಲ್ಡ್‌ ಜೀಟ್ಜ್‌ 19. ಕೇಶವ್‌ ಮಹಾರಾಜ್‌ 4, ಕಗಿಸೊ ರಬಾಡಾ 10 ಮತ್ತು ತಬ್ರೈಜ್‌ ಸಂಶಿ ಔಟ್‌ ಆಗದೇ ಅಜೇಯ 1 ರನ್‌ ಕಲೆಹಾಕಿದರು.

ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್‌ ಹಾಗೂ ಪ್ಯಾಟ್‌ ಕಮಿನ್ಸ್‌ ತಲಾ 3 ವಿಕೆಟ್ ಕಬಳಿಸಿದರೆ, ಜೋಶ್‌ ಹೇಜಲ್‌ವುಡ್‌ ಹಾಗೂ ಟ್ರೇವಿಸ್‌ ಹೆಡ್‌ ತಲಾ 2 ವಿಕೆಟ್‌ ಪಡೆದರು.

andolana

Recent Posts

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

9 mins ago

ಭಾನುವಾರದ ಹಾಡುಪಾಡು | “ಇಲ್ಲ ಕಣ್‌ ಪುಟ್ರಂಗಾ, ಡಿಕೆ ಏನಾರೂ ಮಾಡದ್ರೂ ಮಾಡಬೋದು ಅನಿಸ್ತಾದೆ”

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…

28 mins ago

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…

47 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

3 hours ago

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

17 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

17 hours ago