ಇಂದು ( ನವೆಂಬರ್ 16 ) ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ದಕ್ಷಿಣ ಆಫ್ರಿಕಾ 49.4 ಓವರ್ಗಳಲ್ಲಿ 212 ರನ್ಗಳಿಗೆ ಆಲ್ಔಟ್ ಆಗಿ ಆಸ್ಟ್ರೇಲಿಯಾಗೆ ಗೆಲ್ಲಲು 213 ರನ್ಗಳ ಗುರಿಯನ್ನು ನೀಡಿದೆ.
ಈ ಬಾರಿಯ ಟೂರ್ನಿಯ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಅಚ್ಚರಿಪಡಿಸಿದ್ದ ಸೌತ್ ಆಫ್ರಿಕಾ ಈ ಪಂದ್ಯದಲ್ಲಿ ನಿರೀಕ್ಷಿಸಿದ ಪ್ರದರ್ಶನ ನೀಡುವಲ್ಲಿ ವಿಫಲಗೊಂಡಿದೆ. ತಂಡದ ಟಾಪ್ ಆರ್ಡರ್ ಬ್ಯಾಟ್ಸ್ಮನ್ಗಳು ವಿಫಲರಾದ ಕಾರಣ ತಂಡ ದೊಡ್ಡ ಮೊತ್ತ ಪೇರಿಸುವಲ್ಲಿ ಎಡವಿದೆ.
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿ ಕಾಕ್ 3 ರನ್ ಗಳಿಸಿ ಔಟ್ ಆದರೆ, ನಾಯಕ ತೆಂಬಾ ಬವುಮಾ ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಸ್ಸಿ ವಾನ್ಡರ್ ಡಸನ್ 6 ರನ್ ಗಳಿಸಿದರು, ಏಡನ್ ಮಾರ್ಕ್ರಮ್ 10 ರನ್ ಗಳಿಸಿ ನಿರಾಸೆ ಮೂಡಿಸಿದರು. ಹೀಗೆ ಕೇವಲ 24 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಹೀನಾಯ ಸ್ಥಿತಿ ತಲುಪಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಐದನೇ ವಿಕೆಟ್ಗೆ ಜತೆಯಾದ ಹೈನ್ರಿಚ್ ಕ್ಲಾಸೀನ್ ಹಾಗೂ ಡೇವಿಡ್ ಮಿಲ್ಲರ್ ಆಸರೆಯಾದರು. ಕ್ಲಾಸೀನ್ 47 ರನ್ ಗಳಿಸಿದರೆ, ಡೇವಿಡ್ ಮಿಲ್ಲರ್ 101 ರನ್ ಗಳಿಸಿ ದಕ್ಷಿಣ ಆಫ್ರಿಕಾವನ್ನು ತೀವ್ರ ಮುಖಭಂಗದಿಂದ ಪಾರು ಮಾಡಿದರು. ಉಳಿದಂತೆ ಮಾರ್ಕೊ ಯಾನ್ಸೆನ್ ಶೂನ್ಯ, ಗೆರಾಲ್ಡ್ ಜೀಟ್ಜ್ 19. ಕೇಶವ್ ಮಹಾರಾಜ್ 4, ಕಗಿಸೊ ರಬಾಡಾ 10 ಮತ್ತು ತಬ್ರೈಜ್ ಸಂಶಿ ಔಟ್ ಆಗದೇ ಅಜೇಯ 1 ರನ್ ಕಲೆಹಾಕಿದರು.
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಹಾಗೂ ಪ್ಯಾಟ್ ಕಮಿನ್ಸ್ ತಲಾ 3 ವಿಕೆಟ್ ಕಬಳಿಸಿದರೆ, ಜೋಶ್ ಹೇಜಲ್ವುಡ್ ಹಾಗೂ ಟ್ರೇವಿಸ್ ಹೆಡ್ ತಲಾ 2 ವಿಕೆಟ್ ಪಡೆದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…