BREAKING NEWS

ವಿಶ್ವಕಪ್‌ ಸೆಮಿಫೈನಲ್:‌ ಟೀಮ್‌ ಇಂಡಿಯಾ ಭರ್ಜರಿ ಬ್ಯಾಟಿಂಗ್;‌ ಕಿವೀಸ್‌ಗೆ ಕಠಿಣ ಗುರಿ

ಪ್ರಸ್ತುತ ನಡೆಯುತ್ತಿರುವ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ನಡುವೆ ಸೆಮಿಫೈನಲ್‌ ಪಂದ್ಯ ಜರುಗುತ್ತಿದೆ.

ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯ ಇದಾಗಿದ್ದು ಟಾಸ್‌ ಗೆದ್ದ ಟೀಮ್‌ ಇಂಡಿಯಾ ಮೊದಲು ಬ್ಯಾಟಿಂಗ್‌ ಆರಿಸಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 397 ರನ್‌ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್‌ ತಂಡಕ್ಕೆ ಗೆಲ್ಲಲು 398 ರನ್‌ಗಳ ಕಠಿಣ ಗುರಿಯನ್ನು ನೀಡಿದೆ. 

ಭಾರತದ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಬ್‌ಮನ್‌ ಗಿಲ್‌ ಕಣಕ್ಕಿಳಿದರು. ಪವರ್‌ಪ್ಲೇನಲ್ಲಿ ಬೌಂಡರಿಗಳ ಮೇಲೆ ಬೌಂಡರಿ ಬಾರಿಸಿ ಅಬ್ಬರಿಸಿದ ರೋಹಿತ್‌ ಶರ್ಮಾ 29 ಎಸೆತಗಳಲ್ಲಿ 47 ರನ್‌ ಬಾರಿಸಿದರೆ, ಶುಬ್‌ಮನ್‌ ಗಿಲ್‌ ರಿಟೈರ್ಡ್‌ ಹರ್ಟ್‌ ಆದರೂ 66 ಎಸೆತಗಳಲ್ಲಿ ಅಜೇಯ 80 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿದ ವಿರಾಟ್ ಕೊಹ್ಲಿ 113 ಎಸೆತಗಳಲ್ಲಿ 117 ರನ್‌ ಬಾರಿಸಿದರು. ಶ್ರೇಯಸ್‌ ಅಯ್ಯರ್‌ 70 ಎಸೆತಗಳಲ್ಲಿ 105 ರನ್‌ ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ಕೆಎಲ್‌ ರಾಹುಲ್‌ 20 ಎಸೆತಗಳಲ್ಲಿ ಅಜೇಯ 39 ರನ್‌ ಬಾರಿಸಿದರೆ, ಸೂರ್ಯಕುಮಾರ್‌ ಯಾದವ್‌ 1 ರನ್‌ ಕಲೆಹಾಕಿದರು.

ಭಾರತದ ದಾಂಡಿಗರನ್ನು ಕಟ್ಟಿಹಾಕುವಲ್ಲಿ ವಿಫಲರಾದ ನ್ಯೂಜಿಲೆಂಡ್‌ ತಂಡದ ಪರ ಟಿಮ್‌ ಸೌಥಿ 3 ವಿಕೆಟ್‌ ಪಡೆದರೆ, ಟ್ರೆಂಟ್‌ ಬೌಲ್ಟ್‌ ಒಂದು ವಿಕೆಟ್‌ ಪಡೆದರು. ಇನ್ನುಳಿದ ಯಾವುದೇ ಬೌಲರ್‌ ಸಹ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.

ವಿರಾಟ್‌ ಕೊಹ್ಲಿ ವಿಶ್ವ ದಾಖಲೆ:

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ ಶತಕ ಬಾರಿಸುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್‌ ಆವೃತ್ತಿಯಲ್ಲಿ ಅತಿಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್‌ಮನ್‌ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಈ ಮೂಲಕ ಹಿಂದಿನ ಸಚಿನ್‌ ದಾಖಲೆಯನ್ನು ಮುರಿದುಹಾಕಿದ್ದಾರೆ.

ಸಚಿನ್‌ ತೆಂಡೂಲ್ಕರ್‌ ತಮ್ಮ ಏಕದಿನ ಕ್ರಿಕೆಟ್‌ ಮಾದರಿಯಲ್ಲಿ 49 ಶತಕಗಳನ್ನು ಬಾರಿಸುವ ಮೂಲಕ ಅತಿಹೆಚ್ಚು ಶತಕ ಬಾರಿಸಿದ್ದ ದಾಖಲೆ ಹೊಂದಿದ್ದರು. ವಿರಾಟ್‌ ಕೊಹ್ಲಿ ಇಂದಿನ ಪಂದ್ಯದಲ್ಲಿ 50ನೇ ಏಕದಿನ ಶತಕ ಬಾರಿಸುವ ಮೂಲಕ ಈ ಬೃಹತ್‌ ದಾಖಲೆಯನ್ನು ಅಳಿಸಿಹಾಕಿದ್ದಾರೆ.  

andolana

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

6 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

19 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago