BREAKING NEWS

ವಿಶ್ವಕಪ್‌ ಸೆಮಿಫೈನಲ್:‌ ಟೀಮ್‌ ಇಂಡಿಯಾ ಭರ್ಜರಿ ಬ್ಯಾಟಿಂಗ್;‌ ಕಿವೀಸ್‌ಗೆ ಕಠಿಣ ಗುರಿ

ಪ್ರಸ್ತುತ ನಡೆಯುತ್ತಿರುವ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ನಡುವೆ ಸೆಮಿಫೈನಲ್‌ ಪಂದ್ಯ ಜರುಗುತ್ತಿದೆ.

ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯ ಇದಾಗಿದ್ದು ಟಾಸ್‌ ಗೆದ್ದ ಟೀಮ್‌ ಇಂಡಿಯಾ ಮೊದಲು ಬ್ಯಾಟಿಂಗ್‌ ಆರಿಸಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 397 ರನ್‌ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್‌ ತಂಡಕ್ಕೆ ಗೆಲ್ಲಲು 398 ರನ್‌ಗಳ ಕಠಿಣ ಗುರಿಯನ್ನು ನೀಡಿದೆ. 

ಭಾರತದ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಬ್‌ಮನ್‌ ಗಿಲ್‌ ಕಣಕ್ಕಿಳಿದರು. ಪವರ್‌ಪ್ಲೇನಲ್ಲಿ ಬೌಂಡರಿಗಳ ಮೇಲೆ ಬೌಂಡರಿ ಬಾರಿಸಿ ಅಬ್ಬರಿಸಿದ ರೋಹಿತ್‌ ಶರ್ಮಾ 29 ಎಸೆತಗಳಲ್ಲಿ 47 ರನ್‌ ಬಾರಿಸಿದರೆ, ಶುಬ್‌ಮನ್‌ ಗಿಲ್‌ ರಿಟೈರ್ಡ್‌ ಹರ್ಟ್‌ ಆದರೂ 66 ಎಸೆತಗಳಲ್ಲಿ ಅಜೇಯ 80 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಜವಾಬ್ದಾರಿಯುತ ಬ್ಯಾಟಿಂಗ್‌ ನಡೆಸಿದ ವಿರಾಟ್ ಕೊಹ್ಲಿ 113 ಎಸೆತಗಳಲ್ಲಿ 117 ರನ್‌ ಬಾರಿಸಿದರು. ಶ್ರೇಯಸ್‌ ಅಯ್ಯರ್‌ 70 ಎಸೆತಗಳಲ್ಲಿ 105 ರನ್‌ ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ಕೆಎಲ್‌ ರಾಹುಲ್‌ 20 ಎಸೆತಗಳಲ್ಲಿ ಅಜೇಯ 39 ರನ್‌ ಬಾರಿಸಿದರೆ, ಸೂರ್ಯಕುಮಾರ್‌ ಯಾದವ್‌ 1 ರನ್‌ ಕಲೆಹಾಕಿದರು.

ಭಾರತದ ದಾಂಡಿಗರನ್ನು ಕಟ್ಟಿಹಾಕುವಲ್ಲಿ ವಿಫಲರಾದ ನ್ಯೂಜಿಲೆಂಡ್‌ ತಂಡದ ಪರ ಟಿಮ್‌ ಸೌಥಿ 3 ವಿಕೆಟ್‌ ಪಡೆದರೆ, ಟ್ರೆಂಟ್‌ ಬೌಲ್ಟ್‌ ಒಂದು ವಿಕೆಟ್‌ ಪಡೆದರು. ಇನ್ನುಳಿದ ಯಾವುದೇ ಬೌಲರ್‌ ಸಹ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.

ವಿರಾಟ್‌ ಕೊಹ್ಲಿ ವಿಶ್ವ ದಾಖಲೆ:

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ ಶತಕ ಬಾರಿಸುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್‌ ಆವೃತ್ತಿಯಲ್ಲಿ ಅತಿಹೆಚ್ಚು ಶತಕ ಬಾರಿಸಿದ ಬ್ಯಾಟ್ಸ್‌ಮನ್‌ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಈ ಮೂಲಕ ಹಿಂದಿನ ಸಚಿನ್‌ ದಾಖಲೆಯನ್ನು ಮುರಿದುಹಾಕಿದ್ದಾರೆ.

ಸಚಿನ್‌ ತೆಂಡೂಲ್ಕರ್‌ ತಮ್ಮ ಏಕದಿನ ಕ್ರಿಕೆಟ್‌ ಮಾದರಿಯಲ್ಲಿ 49 ಶತಕಗಳನ್ನು ಬಾರಿಸುವ ಮೂಲಕ ಅತಿಹೆಚ್ಚು ಶತಕ ಬಾರಿಸಿದ್ದ ದಾಖಲೆ ಹೊಂದಿದ್ದರು. ವಿರಾಟ್‌ ಕೊಹ್ಲಿ ಇಂದಿನ ಪಂದ್ಯದಲ್ಲಿ 50ನೇ ಏಕದಿನ ಶತಕ ಬಾರಿಸುವ ಮೂಲಕ ಈ ಬೃಹತ್‌ ದಾಖಲೆಯನ್ನು ಅಳಿಸಿಹಾಕಿದ್ದಾರೆ.  

andolana

Recent Posts

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

40 mins ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

2 hours ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

3 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

4 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

5 hours ago