BREAKING NEWS

ವಿಶ್ವಕಪ್‌ ಫೈನಲ್‌ಗೆ ಭಾರತ: ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಬೌಲಿಂಗ್‌ನಲ್ಲಿ ಶಮಿ ನಂಬರ್‌ 1

ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ನ್ಯೂಜಿಲೆಂಡ್‌ ತಂಡದ ವಿರುದ್ಧ 70 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್‌ ಪಂದ್ಯಕ್ಕೆ ಪ್ರವೇಶ ಪಡೆದುಕೊಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡು 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 397 ರನ್‌ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್‌ ತಂಡಕ್ಕೆ ಗೆಲ್ಲಲು 398 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್‌ 48.5 ಓವರ್‌ಗಳಲ್ಲಿ 327 ರನ್‌ಗಳಿಗೆ ಆಲ್‌ ಔಟ್‌ ಆಗಿದೆ.

ಈ ಗೆಲುವಿನೊಂದಿಗೆ ಭಾರತ ಫೈನಲ್‌ ತಲುಪಿದರೆ ಮೊಹಮ್ಮದ್‌ ಶಮಿ ಪಂದ್ಯದಲ್ಲಿ ಏಳು ವಿಕೆಟ್‌ ಪಡೆಯುವುದರ ಮೂಲಕ ಈ ಬಾರಿಯ ವಿಶ್ವಕಪ್‌ನಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಅತ್ತ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್‌ ಕೊಹ್ಲಿ ಟೂರ್ನಿಯಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಟೂರ್ನಿಯಲ್ಲಿ ಇಲ್ಲಿಯವರೆಗೂ 711 ರನ್‌ ಕಲೆಹಾಕಿರುವ ವಿರಾಟ್‌ ಕೊಹ್ಲಿ ಅತಿಹೆಚ್ಚು ರನ್‌ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದು 591 ರನ್‌ ಗಳಿಸಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್‌ ಡಿ ಕಾಕ್‌ ಎರಡನೇ ಸ್ಥಾನದಲ್ಲಿದ್ದಾರೆ ಹಾಗೂ 578 ರನ್‌ ಬಾರಿಸಿರುವ ನ್ಯೂಜಿಲೆಂಡ್‌ನ ರಚಿನ್‌ ರವೀಂದ್ರ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಪಂದ್ಯದಲ್ಲಿ ಏಳು ವಿಕೆಟ್‌ ಗಳಿಸುವ ಮೂಲಕ ಮೊಹಮ್ಮದ್‌ ಶಮಿ ಈ ಬಾರಿಯ ಟೂರ್ನಿಯಲ್ಲಿ ಒಟ್ಟು 23 ವಿಕೆಟ್‌ ಕಬಳಿಸುವ ಮೂಲಕ ಅತಿಹೆಚ್ಚು ವಿಕೆಟ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆಡಂ ಜಂಪಾ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ. ಆಡಂ ಜಂಪಾ 22 ವಿಕೆಟ್‌ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದು, 21 ವಿಕೆಟ್‌ ಪಡೆದಿರುವ ಶ್ರೀಲಂಕಾದ ದಿಲ್‌ಶಾನ್‌ ಮಧುಶಂಕ ಮೂರನೇ ಸ್ಥಾನದಲ್ಲಿದ್ದಾರೆ. ಇದರ ಜತೆಗೆ ಮೊಹಮ್ಮದ್‌ ಶಮಿ ವಿಶ್ವಕಪ್‌ನ ಪಂದ್ಯವೊಂದರಲ್ಲಿ 7 ವಿಕೆಟ್‌ ಪಡೆದ ಮೊದಲ ಭಾರತೀಯ ಎಂಬ ದಾಖಲೆಯನ್ನೂ ಸಹ ಬರೆದಿದ್ದಾರೆ.

andolana

Recent Posts

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

5 mins ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

26 mins ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

59 mins ago

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

2 hours ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

2 hours ago

ಓದುಗರ ಪತ್ರ: ಯುದ್ಧ-ಬುದ್ಧ

ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…

3 hours ago