BREAKING NEWS

ವಿಶ್ವಕಪ್‌ ಫೈನಲ್‌ಗೆ ಭಾರತ: ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಬೌಲಿಂಗ್‌ನಲ್ಲಿ ಶಮಿ ನಂಬರ್‌ 1

ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ನ್ಯೂಜಿಲೆಂಡ್‌ ತಂಡದ ವಿರುದ್ಧ 70 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್‌ ಪಂದ್ಯಕ್ಕೆ ಪ್ರವೇಶ ಪಡೆದುಕೊಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡು 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 397 ರನ್‌ ಕಲೆಹಾಕಿ ಎದುರಾಳಿ ನ್ಯೂಜಿಲೆಂಡ್‌ ತಂಡಕ್ಕೆ ಗೆಲ್ಲಲು 398 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್‌ 48.5 ಓವರ್‌ಗಳಲ್ಲಿ 327 ರನ್‌ಗಳಿಗೆ ಆಲ್‌ ಔಟ್‌ ಆಗಿದೆ.

ಈ ಗೆಲುವಿನೊಂದಿಗೆ ಭಾರತ ಫೈನಲ್‌ ತಲುಪಿದರೆ ಮೊಹಮ್ಮದ್‌ ಶಮಿ ಪಂದ್ಯದಲ್ಲಿ ಏಳು ವಿಕೆಟ್‌ ಪಡೆಯುವುದರ ಮೂಲಕ ಈ ಬಾರಿಯ ವಿಶ್ವಕಪ್‌ನಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಅತ್ತ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್‌ ಕೊಹ್ಲಿ ಟೂರ್ನಿಯಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಟೂರ್ನಿಯಲ್ಲಿ ಇಲ್ಲಿಯವರೆಗೂ 711 ರನ್‌ ಕಲೆಹಾಕಿರುವ ವಿರಾಟ್‌ ಕೊಹ್ಲಿ ಅತಿಹೆಚ್ಚು ರನ್‌ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದು 591 ರನ್‌ ಗಳಿಸಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್‌ ಡಿ ಕಾಕ್‌ ಎರಡನೇ ಸ್ಥಾನದಲ್ಲಿದ್ದಾರೆ ಹಾಗೂ 578 ರನ್‌ ಬಾರಿಸಿರುವ ನ್ಯೂಜಿಲೆಂಡ್‌ನ ರಚಿನ್‌ ರವೀಂದ್ರ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಪಂದ್ಯದಲ್ಲಿ ಏಳು ವಿಕೆಟ್‌ ಗಳಿಸುವ ಮೂಲಕ ಮೊಹಮ್ಮದ್‌ ಶಮಿ ಈ ಬಾರಿಯ ಟೂರ್ನಿಯಲ್ಲಿ ಒಟ್ಟು 23 ವಿಕೆಟ್‌ ಕಬಳಿಸುವ ಮೂಲಕ ಅತಿಹೆಚ್ಚು ವಿಕೆಟ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆಡಂ ಜಂಪಾ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ. ಆಡಂ ಜಂಪಾ 22 ವಿಕೆಟ್‌ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದು, 21 ವಿಕೆಟ್‌ ಪಡೆದಿರುವ ಶ್ರೀಲಂಕಾದ ದಿಲ್‌ಶಾನ್‌ ಮಧುಶಂಕ ಮೂರನೇ ಸ್ಥಾನದಲ್ಲಿದ್ದಾರೆ. ಇದರ ಜತೆಗೆ ಮೊಹಮ್ಮದ್‌ ಶಮಿ ವಿಶ್ವಕಪ್‌ನ ಪಂದ್ಯವೊಂದರಲ್ಲಿ 7 ವಿಕೆಟ್‌ ಪಡೆದ ಮೊದಲ ಭಾರತೀಯ ಎಂಬ ದಾಖಲೆಯನ್ನೂ ಸಹ ಬರೆದಿದ್ದಾರೆ.

andolana

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

2 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

2 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

4 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

4 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

5 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

6 hours ago