ಆನೇಕಲ್ : ನಿಮ್ಮ ಸರಕಾರವನ್ನು ಕಳ್ಳತನ ಮಾಡಿ 3 ವರ್ಷಗಳಾಗಿವೆ. ನೀವು ಆರಿಸಿದ್ದು ಬೇರೆ ಸರಕಾರ. ಆದರೆ, ಆಡಳಿತ ಮಾಡಿದ್ದು ಬೇರೆ ಸರಕಾರ. ಶಾಸಕರನ್ನು ಹಣದಿಂದ ಖರೀದಿಸಿ ಸರಕಾರವನ್ನು ಕದಿಯಲಾಗಿದೆ. ಕಳ್ಳತನದಿಂದ ರಚನೆಯಾದ ಸರಕಾರವು ಕಳ್ಳತನದ ಹೊರತಾಗಿ ಬೇರೇನೂ ಮಾಡುವುದಿಲ್ಲ. ಅವರಿಗೆ ಬೇರೆ ಏನೂ ಗೊತ್ತಿಲ್ಲ, ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಆನೇಕಲ್ನಲ್ಲಿ ನಡೆದ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, 400 ರೂ. ಇದ್ದ ಸಿಲಿಂಡರ್ 1,100 ರೂ. ಆಗಿದೆ. 70 ರೂ. ಇದ್ದ ಪೆಟ್ರೋಲ್ 100 ರೂ. ಆಗಿದೆ. ಡೀಸೆಲ್ 90 ರೂ. ಆಗಿದೆ. ನೋಟು ಅಮಾನ್ಯೀಕರಣ ಹಾಗೂ ಜಿಎಸ್ಟಿ ಸಣ್ಣಪುಟ್ಟ ವ್ಯಾಪಾರಿಗಳನ್ನು ನಾಶ ಮಾಡಿದೆ. ಕರ್ನಾಟಕದಲ್ಲಿ40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರ ಸರಕಾರ ಎಂದು ನೀವೆಲ್ಲರೂ ಹೇಳಿದ್ದೀರಿ. ಈ ಸರಕಾರ ಭ್ರಷ್ಟಾಚಾರದಲ್ಲಿ ವಿಶ್ವ ದಾಖಲೆ ಮುರಿದಿದೆ, ಎಂದು ಲೇವಡಿ ಮಾಡಿದರು.
ನಾನು ಇಲ್ಲಿಗೆ ಬಂದಾಗ ನಮ್ಮ ನಾಯಕರ ಹೆಸರು ಪ್ರಸ್ತಾಪಿಸಿದೆ. ಆದರೆ, ಮೋದಿ ತಮ್ಮ ಭಾಷಣದಲ್ಲಿ ಪಕ್ಷದ ಯಾರೊಬ್ಬರ ಹೆಸರೂ ಹೇಳುವುದಿಲ್ಲ. ಅವರು ರೋಡ್ ಶೋಗಳಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರನ್ನು ಹೊರಗೆ ಹಾಕಿದ್ದಾರೆ. ಮೋದಿ ಅವರು ಗಾಡಿಯಲ್ಲಿ ಹೋದರೆ ಉಳಿದವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಾರೆ. ಇದೆಲ್ಲಾ ಯಾಕೆ ಆಗುತ್ತಿದೆ ಎಂದು ಕೇಳಿಕೊಂಡೆ. ಆಗ ನನಗೆ ಎರಡು ಉತ್ತರ ಸಿಕ್ಕಿತು. ಒಂದು ಮೋದಿ ಅವರು ಕೇವಲ ಮೋದಿಯನ್ನು ನೋಡಿಕೊಳ್ಳಲು ಮಾತ್ರ ಬಯಸುತ್ತಾರೆ. ಮತ್ತೊಂದು ಅವರ ಹೊರತಾಗಿ ಉಳಿದವರನ್ನು ಕೀಳಾಗಿ ಕಾಣುತ್ತಾರೆ. ಬೊಮ್ಮಾಯಿ ಮತ್ತು ಯಡಿಯೂರಪ್ಪ ಭ್ರಷ್ಟರೆಂದು ತಿಳಿದು ಅವರನ್ನು ದೂರವಿಡುವ ಪ್ರಯತ್ನ ಮಾಡುತ್ತಿದ್ದಾರೆ, ಎಂದು ವ್ಯಂಗ್ಯವಾಡಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…