ಆನೇಕಲ್ : ನಿಮ್ಮ ಸರಕಾರವನ್ನು ಕಳ್ಳತನ ಮಾಡಿ 3 ವರ್ಷಗಳಾಗಿವೆ. ನೀವು ಆರಿಸಿದ್ದು ಬೇರೆ ಸರಕಾರ. ಆದರೆ, ಆಡಳಿತ ಮಾಡಿದ್ದು ಬೇರೆ ಸರಕಾರ. ಶಾಸಕರನ್ನು ಹಣದಿಂದ ಖರೀದಿಸಿ ಸರಕಾರವನ್ನು ಕದಿಯಲಾಗಿದೆ. ಕಳ್ಳತನದಿಂದ ರಚನೆಯಾದ ಸರಕಾರವು ಕಳ್ಳತನದ ಹೊರತಾಗಿ ಬೇರೇನೂ ಮಾಡುವುದಿಲ್ಲ. ಅವರಿಗೆ ಬೇರೆ ಏನೂ ಗೊತ್ತಿಲ್ಲ, ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಆನೇಕಲ್ನಲ್ಲಿ ನಡೆದ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, 400 ರೂ. ಇದ್ದ ಸಿಲಿಂಡರ್ 1,100 ರೂ. ಆಗಿದೆ. 70 ರೂ. ಇದ್ದ ಪೆಟ್ರೋಲ್ 100 ರೂ. ಆಗಿದೆ. ಡೀಸೆಲ್ 90 ರೂ. ಆಗಿದೆ. ನೋಟು ಅಮಾನ್ಯೀಕರಣ ಹಾಗೂ ಜಿಎಸ್ಟಿ ಸಣ್ಣಪುಟ್ಟ ವ್ಯಾಪಾರಿಗಳನ್ನು ನಾಶ ಮಾಡಿದೆ. ಕರ್ನಾಟಕದಲ್ಲಿ40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರ ಸರಕಾರ ಎಂದು ನೀವೆಲ್ಲರೂ ಹೇಳಿದ್ದೀರಿ. ಈ ಸರಕಾರ ಭ್ರಷ್ಟಾಚಾರದಲ್ಲಿ ವಿಶ್ವ ದಾಖಲೆ ಮುರಿದಿದೆ, ಎಂದು ಲೇವಡಿ ಮಾಡಿದರು.
ನಾನು ಇಲ್ಲಿಗೆ ಬಂದಾಗ ನಮ್ಮ ನಾಯಕರ ಹೆಸರು ಪ್ರಸ್ತಾಪಿಸಿದೆ. ಆದರೆ, ಮೋದಿ ತಮ್ಮ ಭಾಷಣದಲ್ಲಿ ಪಕ್ಷದ ಯಾರೊಬ್ಬರ ಹೆಸರೂ ಹೇಳುವುದಿಲ್ಲ. ಅವರು ರೋಡ್ ಶೋಗಳಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರನ್ನು ಹೊರಗೆ ಹಾಕಿದ್ದಾರೆ. ಮೋದಿ ಅವರು ಗಾಡಿಯಲ್ಲಿ ಹೋದರೆ ಉಳಿದವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಾರೆ. ಇದೆಲ್ಲಾ ಯಾಕೆ ಆಗುತ್ತಿದೆ ಎಂದು ಕೇಳಿಕೊಂಡೆ. ಆಗ ನನಗೆ ಎರಡು ಉತ್ತರ ಸಿಕ್ಕಿತು. ಒಂದು ಮೋದಿ ಅವರು ಕೇವಲ ಮೋದಿಯನ್ನು ನೋಡಿಕೊಳ್ಳಲು ಮಾತ್ರ ಬಯಸುತ್ತಾರೆ. ಮತ್ತೊಂದು ಅವರ ಹೊರತಾಗಿ ಉಳಿದವರನ್ನು ಕೀಳಾಗಿ ಕಾಣುತ್ತಾರೆ. ಬೊಮ್ಮಾಯಿ ಮತ್ತು ಯಡಿಯೂರಪ್ಪ ಭ್ರಷ್ಟರೆಂದು ತಿಳಿದು ಅವರನ್ನು ದೂರವಿಡುವ ಪ್ರಯತ್ನ ಮಾಡುತ್ತಿದ್ದಾರೆ, ಎಂದು ವ್ಯಂಗ್ಯವಾಡಿದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…