ದೆಹಲಿ: ದೆಹಲಿಯಲ್ಲಿ ಯಮುನಾ ನದಿ ಬುಧವಾರದಂದು ದಾಖಲೆಯ ಮಟ್ಟದಿಂದ ಉಕ್ಕಿ ಹರಿಯುತ್ತಿದ್ದು, 45 ವರ್ಷಗಳ ಹಿಂದಿನ ದಾಖಲೆಯನ್ನು ಇದು ಮೀರಿದೆ. ಅದೇ ವೇಳೆ ಯಮುನಾ ನದಿಯ ಸಮೀಪದಲ್ಲಿರುವ ತಗ್ಗು ಪ್ರದೇಶಗಳ ನಿವಾಸಿಗಳನ್ನು ಸ್ಥಳಾಂತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆದೇಶಿಸಿದ್ದಾರೆ.
ನಾವು ಜೀವಗಳು, ಆಸ್ತಿಗಳನ್ನು ರಕ್ಷಿಸಬೇಕಾಗಿದೆ. ಯಮುನಾ ನದಿಯ ಸಮೀಪವಿರುವ ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಅಗತ್ಯವಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ದೆಹಲಿ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಗೆ ತಿಳಿಸಿರುವುದಾಗಿ ಅವರು ಹೇಳಿದ್ದಾರೆ.
ಯಮುನಾದಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟದಿಂದಾಗಿ ಅಗತ್ಯವಿದ್ದರೆ ಶಾಲೆಗಳನ್ನು ಪರಿಹಾರ ಶಿಬಿರಗಳನ್ನಾಗಿ ಪರಿವರ್ತಿಸಲು ಜಿಲ್ಲಾಧಿಕಾರಿಗಳಿಗೆ ಕೇಜ್ರಿವಾಲ್ ಸೂಚನೆ ನೀಡಿದರು.
ದೆಹಲಿಯ ಯಮುನಾ ನದಿ ನೀರಿನ ಮಟ್ಟ ಬುಧವಾರ 207.71 ಮೀಟರ್ಗೆ ಏರಿದ್ದು, 1978 ರಲ್ಲಿ ನೀರಿನ ಮಟ್ಟ 207.49 ಮೀಟರ್ಗಳಷ್ಟು ಏರಿಕೆ ಆಗಿತ್ತು. ನೀರಿನ ಮಟ್ಟ ಏರಿಕೆ ಆಗುತ್ತಿದ್ದಂತೆ ಕೇಜ್ರಿವಾಲ್ ತುರ್ತು ಸಭೆ ಕರೆದಿದ್ದಾರೆ. ಮಳೆಯಿಂದಾಗಿ ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು ದೆಹಲಿ ಪೊಲೀಸರು ನಗರದ ದುರ್ಬಲ ಭಾಗಗಳಲ್ಲಿ ಜನರು ಒಟ್ಟುಸೇರುವುದನ್ನು ನಿಷೇಧಿಸಿದ್ದಾರೆ.
ನದಿಯ ಸಮೀಪವಿರುವ ಮನೆಗಳು ಮತ್ತು ಮಾರುಕಟ್ಟೆಗಳಿಗೆ ನೀರು ನುಗ್ಗಿದ್ದರಿಂದ ಈಗಾಗಲೇ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಕೇಂದ್ರ ಜಲ ಆಯೋಗದ ಮುನ್ಸೂಚನೆಗಳು ನೀರಿನ ಮಟ್ಟವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸೂಚಿಸುತ್ತದೆ.
ಮುಂದಿನ ಎರಡು ದಿನಗಳಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಪ್ರವಾಹದ ಭೀತಿ ಉಂಟು ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಕೇಜ್ರಿವಾಲ್, ಯಮುನಾದಲ್ಲಿ ನೀರಿನ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡಲು ಹರ್ಯಾಣದ ಹತ್ನಿಕುಂಡ್ ಬ್ಯಾರೇಜ್ನಿಂದ ಸೀಮಿತ ನೀರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ದೇಶದ ರಾಜಧಾನಿಯಲ್ಲಿ ಪ್ರವಾಹದ ಸುದ್ದಿ ಜಗತ್ತಿಗೆ ಒಳ್ಳೆಯ ಸಂದೇಶವನ್ನು ನೀಡುವುದಿಲ್ಲ. ನಾವು ಒಟ್ಟಾಗಿ ದೆಹಲಿಯ ಜನರನ್ನು ಈ ಪರಿಸ್ಥಿತಿಯಿಂದ ರಕ್ಷಿಸಬೇಕಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಮುಂಬರುವ ವಾರಗಳಲ್ಲಿ ದೆಹಲಿಯು ಜಿ -20 ಶೃಂಗಸಭೆಯನ್ನು ಆಯೋಜಿಸಲು ತಯಾರಿ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯಲ್ಲಿ ನಿರಾಶ್ರಿತ ನಿವಾಸಿಗಳು ತೊಂದರೆಗೊಳಗಾಗಿದ್ದು ಸರ್ಕಾರವು ಸಮರ್ಪಕವಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅವರು ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
ನದಿ ದಂಡೆಗಳನ್ನು ಬಲಪಡಿಸಲು ಮತ್ತು ಪ್ರವಾಹ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ದೆಹಲಿ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕಂದಾಯ ಸಚಿವ ಅತಿಶಿ ಹೇಳಿದ್ದಾರೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿವಾಸಿಗಳಿಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಮತ್ತು ತಗ್ಗು ಪ್ರದೇಶಗಳನ್ನು ತಪ್ಪಿಸಲು ಸಲಹೆಗಳನ್ನು ನೀಡಿದೆ.
ಪ್ರವಾಹವು ದೆಹಲಿಗೆ ಹೊಸದಲ್ಲ, 1924, 1977, 1978, 1995, 2010, ಮತ್ತು 2013 ರಲ್ಲಿ ಪ್ರಮುಖ ಪ್ರವಾಹಗಳು ನಗರವನ್ನು ಮುಳುಗಿಸಿವೆ.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…