ದೆಹಲಿ: ದೆಹಲಿಯಲ್ಲಿ ಯಮುನಾ ನದಿ ಬುಧವಾರದಂದು ದಾಖಲೆಯ ಮಟ್ಟದಿಂದ ಉಕ್ಕಿ ಹರಿಯುತ್ತಿದ್ದು, 45 ವರ್ಷಗಳ ಹಿಂದಿನ ದಾಖಲೆಯನ್ನು ಇದು ಮೀರಿದೆ. ಅದೇ ವೇಳೆ ಯಮುನಾ ನದಿಯ ಸಮೀಪದಲ್ಲಿರುವ ತಗ್ಗು ಪ್ರದೇಶಗಳ ನಿವಾಸಿಗಳನ್ನು ಸ್ಥಳಾಂತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆದೇಶಿಸಿದ್ದಾರೆ.
ನಾವು ಜೀವಗಳು, ಆಸ್ತಿಗಳನ್ನು ರಕ್ಷಿಸಬೇಕಾಗಿದೆ. ಯಮುನಾ ನದಿಯ ಸಮೀಪವಿರುವ ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಅಗತ್ಯವಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ದೆಹಲಿ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಗೆ ತಿಳಿಸಿರುವುದಾಗಿ ಅವರು ಹೇಳಿದ್ದಾರೆ.
ಯಮುನಾದಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟದಿಂದಾಗಿ ಅಗತ್ಯವಿದ್ದರೆ ಶಾಲೆಗಳನ್ನು ಪರಿಹಾರ ಶಿಬಿರಗಳನ್ನಾಗಿ ಪರಿವರ್ತಿಸಲು ಜಿಲ್ಲಾಧಿಕಾರಿಗಳಿಗೆ ಕೇಜ್ರಿವಾಲ್ ಸೂಚನೆ ನೀಡಿದರು.
ದೆಹಲಿಯ ಯಮುನಾ ನದಿ ನೀರಿನ ಮಟ್ಟ ಬುಧವಾರ 207.71 ಮೀಟರ್ಗೆ ಏರಿದ್ದು, 1978 ರಲ್ಲಿ ನೀರಿನ ಮಟ್ಟ 207.49 ಮೀಟರ್ಗಳಷ್ಟು ಏರಿಕೆ ಆಗಿತ್ತು. ನೀರಿನ ಮಟ್ಟ ಏರಿಕೆ ಆಗುತ್ತಿದ್ದಂತೆ ಕೇಜ್ರಿವಾಲ್ ತುರ್ತು ಸಭೆ ಕರೆದಿದ್ದಾರೆ. ಮಳೆಯಿಂದಾಗಿ ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು ದೆಹಲಿ ಪೊಲೀಸರು ನಗರದ ದುರ್ಬಲ ಭಾಗಗಳಲ್ಲಿ ಜನರು ಒಟ್ಟುಸೇರುವುದನ್ನು ನಿಷೇಧಿಸಿದ್ದಾರೆ.
ನದಿಯ ಸಮೀಪವಿರುವ ಮನೆಗಳು ಮತ್ತು ಮಾರುಕಟ್ಟೆಗಳಿಗೆ ನೀರು ನುಗ್ಗಿದ್ದರಿಂದ ಈಗಾಗಲೇ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಕೇಂದ್ರ ಜಲ ಆಯೋಗದ ಮುನ್ಸೂಚನೆಗಳು ನೀರಿನ ಮಟ್ಟವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸೂಚಿಸುತ್ತದೆ.
ಮುಂದಿನ ಎರಡು ದಿನಗಳಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಪ್ರವಾಹದ ಭೀತಿ ಉಂಟು ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಕೇಜ್ರಿವಾಲ್, ಯಮುನಾದಲ್ಲಿ ನೀರಿನ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡಲು ಹರ್ಯಾಣದ ಹತ್ನಿಕುಂಡ್ ಬ್ಯಾರೇಜ್ನಿಂದ ಸೀಮಿತ ನೀರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ದೇಶದ ರಾಜಧಾನಿಯಲ್ಲಿ ಪ್ರವಾಹದ ಸುದ್ದಿ ಜಗತ್ತಿಗೆ ಒಳ್ಳೆಯ ಸಂದೇಶವನ್ನು ನೀಡುವುದಿಲ್ಲ. ನಾವು ಒಟ್ಟಾಗಿ ದೆಹಲಿಯ ಜನರನ್ನು ಈ ಪರಿಸ್ಥಿತಿಯಿಂದ ರಕ್ಷಿಸಬೇಕಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಮುಂಬರುವ ವಾರಗಳಲ್ಲಿ ದೆಹಲಿಯು ಜಿ -20 ಶೃಂಗಸಭೆಯನ್ನು ಆಯೋಜಿಸಲು ತಯಾರಿ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯಲ್ಲಿ ನಿರಾಶ್ರಿತ ನಿವಾಸಿಗಳು ತೊಂದರೆಗೊಳಗಾಗಿದ್ದು ಸರ್ಕಾರವು ಸಮರ್ಪಕವಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅವರು ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
ನದಿ ದಂಡೆಗಳನ್ನು ಬಲಪಡಿಸಲು ಮತ್ತು ಪ್ರವಾಹ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ದೆಹಲಿ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕಂದಾಯ ಸಚಿವ ಅತಿಶಿ ಹೇಳಿದ್ದಾರೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿವಾಸಿಗಳಿಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಮತ್ತು ತಗ್ಗು ಪ್ರದೇಶಗಳನ್ನು ತಪ್ಪಿಸಲು ಸಲಹೆಗಳನ್ನು ನೀಡಿದೆ.
ಪ್ರವಾಹವು ದೆಹಲಿಗೆ ಹೊಸದಲ್ಲ, 1924, 1977, 1978, 1995, 2010, ಮತ್ತು 2013 ರಲ್ಲಿ ಪ್ರಮುಖ ಪ್ರವಾಹಗಳು ನಗರವನ್ನು ಮುಳುಗಿಸಿವೆ.
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…
ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…
ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ ಚಾಮರಾಜನಗರ: ಇಲ್ಲಿನ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…