BREAKING NEWS

Yash 19: ಬಹುದಿನಗಳ ಕಾಯುವಿಕೆಗೆ ಬಿತ್ತು ತೆರೆ, ಯಶ್‌ 19 ಟೈಟಲ್‌ ಘೋಷಣೆ; ಮಹಿಳಾ ಡೈರೆಕ್ಟರ್‌ ಜತೆ ಯಶ್‌ ಸಿನಿಮಾ

ಯಶ್‌ 19 ಸತತವಾಗಿ ಒಂದು ವರ್ಷಕ್ಕೂ ಹೆಚ್ಚಿನ ಕಾಲ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿದ್ದ ಟಾಪಿಕ್.‌ ಕೆಜಿಎಫ್‌ ಚಿತ್ರ ಸರಣಿಯ ಬಳಿಕ ಕಥೆ ಆರಿಸಿಕೊಳ್ಳುವಲ್ಲಿ ತೀರ ನಿಗಾ ವಹಿಸಿದ ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಹಲವಾರು ನಿರ್ದೇಶಕರ ಹೆಸರು ಕೇಳಿ ಬಂದಿತ್ತು. ಇದೀಗ ಇಂದು ( ಡಿಸೆಂಬರ್‌ 8 ) ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಹಾಗೂ ಈ ಸಿನಿಮಾದ ಹೆಸರೇನು ಎಂಬುದು ಹೊರಬಿದ್ದಿದೆ.

ಯಶ್‌ ಮಲಯಾಳಂನ ಮಾಜಿ ನಟಿ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್‌ ಜತೆ ತನ್ನ ಮುಂದಿನ ಚಿತ್ರವನ್ನು ಮಾಡುತ್ತಿದ್ದಾರೆ. ಲಯರ್ಸ್‌ ಡೈಸ್‌ ಎಂಬ ಹಿಂದಿ ಚಿತ್ರ ಹಾಗೂ ಮುತ್ತೂನ್‌ ಎಂಬ ಮಲಯಾಳಂ ಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ಗೀತು ಮೋಹನ್‌ದಾಸ್‌ ಇದೀಗ ತಮ್ಮ ಮೂರನೇ ಚಿತ್ರವನ್ನು ಯಶ್‌ಗೆ ನಿರ್ದೇಶಿಸಲಿದ್ದಾರೆ. ಚಿತ್ರಕ್ಕೆ ʼಟಾಕ್ಸಿಕ್‌ʼ ಎಂದು ಹೆಸರಿಡಲಾಗಿದೆ.

ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್‌ ಬಂಡವಾಳ ಹೂಡಿದ್ದು, ಮಾನ್ಸ್ಟರ್‌ ಮೈಂಡ್‌ ಕ್ರಿಯೇಷನ್ಸ್ ಸಹ ಬಂಡವಾಳ ಹೂಡಿದೆ. ಚಿತ್ರ 2025ರ ಏಪ್ರಿಲ್‌ 10ಕ್ಕೆ ತೆರೆಗೆ ಬರಲಿದೆ. 

andolana

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

9 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

12 hours ago