BREAKING NEWS

Yash 19: ಬಹುದಿನಗಳ ಕಾಯುವಿಕೆಗೆ ಬಿತ್ತು ತೆರೆ, ಯಶ್‌ 19 ಟೈಟಲ್‌ ಘೋಷಣೆ; ಮಹಿಳಾ ಡೈರೆಕ್ಟರ್‌ ಜತೆ ಯಶ್‌ ಸಿನಿಮಾ

ಯಶ್‌ 19 ಸತತವಾಗಿ ಒಂದು ವರ್ಷಕ್ಕೂ ಹೆಚ್ಚಿನ ಕಾಲ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿದ್ದ ಟಾಪಿಕ್.‌ ಕೆಜಿಎಫ್‌ ಚಿತ್ರ ಸರಣಿಯ ಬಳಿಕ ಕಥೆ ಆರಿಸಿಕೊಳ್ಳುವಲ್ಲಿ ತೀರ ನಿಗಾ ವಹಿಸಿದ ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಎಂಬ ಪ್ರಶ್ನೆ ಎದ್ದಿತ್ತು. ಹಲವಾರು ನಿರ್ದೇಶಕರ ಹೆಸರು ಕೇಳಿ ಬಂದಿತ್ತು. ಇದೀಗ ಇಂದು ( ಡಿಸೆಂಬರ್‌ 8 ) ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಯಶ್‌ ಯಾವ ನಿರ್ದೇಶಕರ ಜತೆ ಸಿನಿಮಾ ಮಾಡಲಿದ್ದಾರೆ ಹಾಗೂ ಈ ಸಿನಿಮಾದ ಹೆಸರೇನು ಎಂಬುದು ಹೊರಬಿದ್ದಿದೆ.

ಯಶ್‌ ಮಲಯಾಳಂನ ಮಾಜಿ ನಟಿ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್‌ ಜತೆ ತನ್ನ ಮುಂದಿನ ಚಿತ್ರವನ್ನು ಮಾಡುತ್ತಿದ್ದಾರೆ. ಲಯರ್ಸ್‌ ಡೈಸ್‌ ಎಂಬ ಹಿಂದಿ ಚಿತ್ರ ಹಾಗೂ ಮುತ್ತೂನ್‌ ಎಂಬ ಮಲಯಾಳಂ ಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ಗೀತು ಮೋಹನ್‌ದಾಸ್‌ ಇದೀಗ ತಮ್ಮ ಮೂರನೇ ಚಿತ್ರವನ್ನು ಯಶ್‌ಗೆ ನಿರ್ದೇಶಿಸಲಿದ್ದಾರೆ. ಚಿತ್ರಕ್ಕೆ ʼಟಾಕ್ಸಿಕ್‌ʼ ಎಂದು ಹೆಸರಿಡಲಾಗಿದೆ.

ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್‌ ಬಂಡವಾಳ ಹೂಡಿದ್ದು, ಮಾನ್ಸ್ಟರ್‌ ಮೈಂಡ್‌ ಕ್ರಿಯೇಷನ್ಸ್ ಸಹ ಬಂಡವಾಳ ಹೂಡಿದೆ. ಚಿತ್ರ 2025ರ ಏಪ್ರಿಲ್‌ 10ಕ್ಕೆ ತೆರೆಗೆ ಬರಲಿದೆ. 

andolana

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

2 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

4 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

6 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

11 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

11 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

13 hours ago