BREAKING NEWS

ನಾಪತ್ತೆಯಾಗಿದ್ದ ಯೋಗೇಶ್ವರ್‌ ಭಾವ ಶವವಾಗಿ ಪತ್ತೆ

ಚಾಮರಾಜನಗರ : ಕಳೆದ ಶುಕ್ರವಾರ ನಾಪತ್ತೆಯಾಗಿದ್ದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಅವರ ಭಾವ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಾಮರಾಜನಗರದ ಹನೂರಿನ ಬಳಿಯ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ತಲೆಯಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಪತ್ತೆಯಾಗಿದೆ.

ಕಳೆದ ಶುಕ್ರವಾರ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ರಾಮನಗರದ ಚಳ್ಳಕೆರೆಯಲ್ಲಿರುವ ತಮ್ಮ ತೋಟದ ಮನೆಯಿಂದ ನಾಪತ್ತೆಯಾಗಿದ್ದರು. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಶುಕ್ರವಾರ ಬೆಳಗ್ಗೆಯಿಂದಲೂ ನಾಪತ್ತೆಯಾಗಿದ್ದರು.

ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿರುವ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲದೇ ಮಹದೇವಯ್ಯ ಅವರ ಮೊಬೈಲ್‌ ಸಹ ಸ್ವಿಚ್‌ ಆಫ್‌ ಆಗಿತ್ತು ಇದರಿಂದ ಮಹದೇವಯ್ಯ ಅವರು ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿತ್ತು.

ಈ ನಡುವೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿತ್ತು. ಈ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು, ಕಾರು ಪತ್ತೆಯಾಗಿರುವ ಸ್ಥಳಕ್ಕೆ ಫಾರೆನ್ಸಿಕ್‌ ತಂಡ ಹಾಗೂ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮಹದೇವಯ್ಯನವರನ್ನು ಪತ್ತೆ ಹಚ್ಚಲು ಚನ್ನಪಟ್ಟಣ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ಕೂಡ ರಚನೆ ಮಾಡಲಾಗಿತ್ತು.

ಇದೀಗ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಮಹದೇವಯ್ಯ ಅವರ ತಲೆಗೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂಬಂತೆ ಕಾಣುತ್ತಿದೆ. ಆದರೆ ಯಾರು ಕೊಲೆ ಮಾಡಿದ್ದಾರೆ ಯಾತಕ್ಕಾಗಿ ಈ ರೀತಿಯಾಗಿ ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.

lokesh

Recent Posts

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

3 mins ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

21 mins ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

5 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

5 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

5 hours ago