BREAKING NEWS

ನಾಪತ್ತೆಯಾಗಿದ್ದ ಯೋಗೇಶ್ವರ್‌ ಭಾವ ಶವವಾಗಿ ಪತ್ತೆ

ಚಾಮರಾಜನಗರ : ಕಳೆದ ಶುಕ್ರವಾರ ನಾಪತ್ತೆಯಾಗಿದ್ದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಅವರ ಭಾವ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಾಮರಾಜನಗರದ ಹನೂರಿನ ಬಳಿಯ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ತಲೆಯಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಪತ್ತೆಯಾಗಿದೆ.

ಕಳೆದ ಶುಕ್ರವಾರ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ರಾಮನಗರದ ಚಳ್ಳಕೆರೆಯಲ್ಲಿರುವ ತಮ್ಮ ತೋಟದ ಮನೆಯಿಂದ ನಾಪತ್ತೆಯಾಗಿದ್ದರು. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಶುಕ್ರವಾರ ಬೆಳಗ್ಗೆಯಿಂದಲೂ ನಾಪತ್ತೆಯಾಗಿದ್ದರು.

ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿರುವ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲದೇ ಮಹದೇವಯ್ಯ ಅವರ ಮೊಬೈಲ್‌ ಸಹ ಸ್ವಿಚ್‌ ಆಫ್‌ ಆಗಿತ್ತು ಇದರಿಂದ ಮಹದೇವಯ್ಯ ಅವರು ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿತ್ತು.

ಈ ನಡುವೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿತ್ತು. ಈ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು, ಕಾರು ಪತ್ತೆಯಾಗಿರುವ ಸ್ಥಳಕ್ಕೆ ಫಾರೆನ್ಸಿಕ್‌ ತಂಡ ಹಾಗೂ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮಹದೇವಯ್ಯನವರನ್ನು ಪತ್ತೆ ಹಚ್ಚಲು ಚನ್ನಪಟ್ಟಣ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ಕೂಡ ರಚನೆ ಮಾಡಲಾಗಿತ್ತು.

ಇದೀಗ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಮಹದೇವಯ್ಯ ಅವರ ತಲೆಗೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂಬಂತೆ ಕಾಣುತ್ತಿದೆ. ಆದರೆ ಯಾರು ಕೊಲೆ ಮಾಡಿದ್ದಾರೆ ಯಾತಕ್ಕಾಗಿ ಈ ರೀತಿಯಾಗಿ ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.

lokesh

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

1 hour ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

1 hour ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

1 hour ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

1 hour ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

1 hour ago