ಬೆಂಗಳೂರು : ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?, ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ? ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗಾಗಿ (ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ) ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಇತ್ತೀಚೆಗೆ ಟ್ಯಾಕ್ಸಿ / ಗೂಡ್ಸ್ / ಪ್ಯಾಸೆಂಜರ್ ಆಟೋ ರಿಕ್ಷಾ ವಾಹನ ಖರೀದಿಗಾಗಿ 3 ಲಕ್ಷ ರೂ. ಸಹಾಯಧನ ಸೌಲಭ್ಯ ನೀಡುವ ಯೋಜನೆಯನ್ನು ಪ್ರಕಟಿಸಿತ್ತು.
ಇದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದ ತೇಜಸ್ವಿ ಸೂರ್ಯ ಅವರು, ಇದು ಧರ್ಮಾಧಾರಿತ ಯೋಜನೆ ಎಂದು ಟೀಕಿಸಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ? ಪ್ರಶ್ನಿಸಿದೆ.
ದಲಿತರ ಏಳಿಗೆಗೂ ಆಕ್ಷೇಪ, ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೂ ಆಕ್ಷೇಪ ಮಾಡುವ ನಿಮ್ಮ ಉದ್ದೇಶವಾದರೂ ಏನು?, ದೇವಾಲಯಗಳ ಅರ್ಚಕರ ತಸ್ತಿಕ್ ಹಣವನ್ನೂ ಏರಿಸಿದೆ ನಮ್ಮ ಸರಕಾರ, ಇದಕ್ಕೂ ನಿಮ್ಮ ಆಕ್ಷೇಪ ಇದೆಯೇ?, ಹಾಲಿನ ದರ ಏರಿಕೆಯ ಲಾಭ ರೈತರ ಕೈ ಸೇರುವುದು ಇಷ್ಟವಿಲ್ಲವೇ?, ವಿದ್ಯುತ್ ದರ ಏರಿಸಿದ್ದು ಹಿಂದಿನ ಬಿಜೆಪಿ ಸರಕಾರ ಎನ್ನುವುದು ತಿಳಿದಿಲ್ಲವೇ?
ಗ್ಯಾಸ್ ಬೆಲೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾತಾಡುವುದಿಲ್ಲವೇಕೆ? ದುಬಾರಿ ಜಿಎಸ್ ಟಿ ಬಗ್ಗೆ ತುಟಿ ಬಿಚ್ಚುವುದಿಲ್ಲವೇಕೆ?, ಜನರ ಹಣವನ್ನು ಜನರಿಗೇ ಕೊಡುವ ಬಗ್ಗೆ ಇಷ್ಟೊಂದು ಅಸಹನೆ ತೋರುವ ಬಿಜೆಪಿಗರ ಪ್ರಕಾರ ಜನರ ಹಣವನ್ನು ಉದ್ಯಮಿಗಳ ಸಾಲಮನ್ನಾ ಮಾಡಲು ಬಳಸುವುದು ಅಭಿವೃದ್ಧಿಯೇ? ಎಂದು ಕಿಡಿಕಾರಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…