BREAKING NEWS

ತೇಜಸ್ವಿ ಸೂರ್ಯ ಗಾಂಪರ ಗುಂಪಿನ ಎಳೆಯ ಸದಸ್ಯ : ಕಾಂಗ್ರೆಸ್

ಬೆಂಗಳೂರು : ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?, ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ? ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗಾಗಿ (ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ) ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಇತ್ತೀಚೆಗೆ ಟ್ಯಾಕ್ಸಿ / ಗೂಡ್ಸ್ / ಪ್ಯಾಸೆಂಜರ್ ಆಟೋ ರಿಕ್ಷಾ ವಾಹನ ಖರೀದಿಗಾಗಿ 3 ಲಕ್ಷ ರೂ. ಸಹಾಯಧನ ಸೌಲಭ್ಯ ನೀಡುವ ಯೋಜನೆಯನ್ನು ಪ್ರಕಟಿಸಿತ್ತು.

ಇದನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದ ತೇಜಸ್ವಿ ಸೂರ್ಯ ಅವರು, ಇದು ಧರ್ಮಾಧಾರಿತ ಯೋಜನೆ ಎಂದು ಟೀಕಿಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ? ಪ್ರಶ್ನಿಸಿದೆ.

ದಲಿತರ ಏಳಿಗೆಗೂ ಆಕ್ಷೇಪ, ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೂ ಆಕ್ಷೇಪ ಮಾಡುವ ನಿಮ್ಮ ಉದ್ದೇಶವಾದರೂ ಏನು?, ದೇವಾಲಯಗಳ ಅರ್ಚಕರ ತಸ್ತಿಕ್ ಹಣವನ್ನೂ ಏರಿಸಿದೆ ನಮ್ಮ ಸರಕಾರ, ಇದಕ್ಕೂ ನಿಮ್ಮ ಆಕ್ಷೇಪ ಇದೆಯೇ?, ಹಾಲಿನ ದರ ಏರಿಕೆಯ ಲಾಭ ರೈತರ ಕೈ ಸೇರುವುದು ಇಷ್ಟವಿಲ್ಲವೇ?, ವಿದ್ಯುತ್ ದರ ಏರಿಸಿದ್ದು ಹಿಂದಿನ ಬಿಜೆಪಿ ಸರಕಾರ ಎನ್ನುವುದು ತಿಳಿದಿಲ್ಲವೇ?

ಗ್ಯಾಸ್ ಬೆಲೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾತಾಡುವುದಿಲ್ಲವೇಕೆ? ದುಬಾರಿ ಜಿಎಸ್ ಟಿ ಬಗ್ಗೆ ತುಟಿ ಬಿಚ್ಚುವುದಿಲ್ಲವೇಕೆ?, ಜನರ ಹಣವನ್ನು ಜನರಿಗೇ ಕೊಡುವ ಬಗ್ಗೆ ಇಷ್ಟೊಂದು ಅಸಹನೆ ತೋರುವ ಬಿಜೆಪಿಗರ ಪ್ರಕಾರ ಜನರ ಹಣವನ್ನು ಉದ್ಯಮಿಗಳ ಸಾಲಮನ್ನಾ ಮಾಡಲು ಬಳಸುವುದು ಅಭಿವೃದ್ಧಿಯೇ? ಎಂದು ಕಿಡಿಕಾರಿದೆ.

lokesh

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

1 hour ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

3 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

6 hours ago