BREAKING NEWS

ತೇಜಸ್ವಿ ಸೂರ್ಯ ಗಾಂಪರ ಗುಂಪಿನ ಎಳೆಯ ಸದಸ್ಯ : ಕಾಂಗ್ರೆಸ್

ಬೆಂಗಳೂರು : ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?, ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ? ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗಾಗಿ (ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ) ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಇತ್ತೀಚೆಗೆ ಟ್ಯಾಕ್ಸಿ / ಗೂಡ್ಸ್ / ಪ್ಯಾಸೆಂಜರ್ ಆಟೋ ರಿಕ್ಷಾ ವಾಹನ ಖರೀದಿಗಾಗಿ 3 ಲಕ್ಷ ರೂ. ಸಹಾಯಧನ ಸೌಲಭ್ಯ ನೀಡುವ ಯೋಜನೆಯನ್ನು ಪ್ರಕಟಿಸಿತ್ತು.

ಇದನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದ ತೇಜಸ್ವಿ ಸೂರ್ಯ ಅವರು, ಇದು ಧರ್ಮಾಧಾರಿತ ಯೋಜನೆ ಎಂದು ಟೀಕಿಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ? ಪ್ರಶ್ನಿಸಿದೆ.

ದಲಿತರ ಏಳಿಗೆಗೂ ಆಕ್ಷೇಪ, ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೂ ಆಕ್ಷೇಪ ಮಾಡುವ ನಿಮ್ಮ ಉದ್ದೇಶವಾದರೂ ಏನು?, ದೇವಾಲಯಗಳ ಅರ್ಚಕರ ತಸ್ತಿಕ್ ಹಣವನ್ನೂ ಏರಿಸಿದೆ ನಮ್ಮ ಸರಕಾರ, ಇದಕ್ಕೂ ನಿಮ್ಮ ಆಕ್ಷೇಪ ಇದೆಯೇ?, ಹಾಲಿನ ದರ ಏರಿಕೆಯ ಲಾಭ ರೈತರ ಕೈ ಸೇರುವುದು ಇಷ್ಟವಿಲ್ಲವೇ?, ವಿದ್ಯುತ್ ದರ ಏರಿಸಿದ್ದು ಹಿಂದಿನ ಬಿಜೆಪಿ ಸರಕಾರ ಎನ್ನುವುದು ತಿಳಿದಿಲ್ಲವೇ?

ಗ್ಯಾಸ್ ಬೆಲೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾತಾಡುವುದಿಲ್ಲವೇಕೆ? ದುಬಾರಿ ಜಿಎಸ್ ಟಿ ಬಗ್ಗೆ ತುಟಿ ಬಿಚ್ಚುವುದಿಲ್ಲವೇಕೆ?, ಜನರ ಹಣವನ್ನು ಜನರಿಗೇ ಕೊಡುವ ಬಗ್ಗೆ ಇಷ್ಟೊಂದು ಅಸಹನೆ ತೋರುವ ಬಿಜೆಪಿಗರ ಪ್ರಕಾರ ಜನರ ಹಣವನ್ನು ಉದ್ಯಮಿಗಳ ಸಾಲಮನ್ನಾ ಮಾಡಲು ಬಳಸುವುದು ಅಭಿವೃದ್ಧಿಯೇ? ಎಂದು ಕಿಡಿಕಾರಿದೆ.

lokesh

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago