BREAKING NEWS

2022ರಲ್ಲಿ ಭಾರತದಲ್ಲಿ ಯುವಜನರ ನಿರುದ್ಯೋಗ ದರ ನೆರೆದೇಶಗಳಿಗಿಂತ ಹೆಚ್ಚಿತ್ತು: ವಿಶ್ವಬ್ಯಾಂಕ್ ವರದಿ

ನವದೆಹಲಿ : ಕಳೆದ ವರ್ಷ ಭಾರತದಲ್ಲಿ ಯುವಜನರ ನಿರುದ್ಯೋಗ ದರವು ಶೇ.23.22ರಷ್ಟಿದ್ದು,ಇದು ನೆರೆದೇಶಗಳಾದ ಪಾಕಿಸ್ತಾನ (ಶೇ.11.3),ಬಾಂಗ್ಲಾದೇಶ (ಶೇ.12.9) ಮತ್ತು ಭೂತಾನ (ಶೇ.14.4)ಗಿಂತ ಅಧಿಕವಾಗಿತ್ತು ಎಂದು ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 2022ರಲ್ಲಿ ನಿರುದ್ಯೋಗ ದರವು ಚೀನಾದಲ್ಲಿ ಶೇ.13.2,ಸಿರಿಯಾದಲ್ಲಿ ಶೇ.22.1,ಇಂಡೋನೇಶ್ಯಾದಲ್ಲಿ ಶೇ.13,ಮಲೇಶ್ಯಾದಲ್ಲಿ ಶೇ.11.7,ವಿಯೆಟ್ನಾಮ್ನಲ್ಲಿ ಶೇ.7.4,ದಕ್ಷಿಣ ಕೊರಿಯಾದಲ್ಲಿ ಶೇ.6.9 ಮತ್ತು ಸಿಂಗಪುರದಲ್ಲಿ ಶೇ.6.1ರಷ್ಟಿತ್ತು.

ವರದಿಯು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯಿಂದ ದತ್ತಾಂಶಗಳನ್ನು ಪಡೆದುಕೊಂಡಿದೆ.

ಯುವಜನರ ನಿರುದ್ಯೋಗ ದರವು 15ರಿಂದ 24 ವರ್ಷ ವಯೋಮಾನದ, ಉದ್ಯೋಗವಿಲ್ಲದ ಆದರೆ ಉದ್ಯೋಗಕ್ಕಾಗಿ ಸಕ್ರಿಯ ಹುಡುಕಾಟದಲ್ಲಿರುವವರನ್ನು ಸೂಚಿಸುತ್ತದೆ.

15ರಿಂದ 34 ವರ್ಷ ವಯೋಮಾನದ ಸುಮಾರು ಶೇ.36ರಷ್ಟು ಭಾರತೀಯರು ದೇಶದಲ್ಲಿ ಯುವ ನಿರುದ್ಯೋಗವು ಅತ್ಯಂತ ದೊಡ್ಡ ಸಮಸ್ಯೆಯಾಗಿದೆ ಎಂದು ನಂಬಿದ್ದಾರೆ ಎಂದು ಲೋಕನೀತಿ-ಸಿಡಿಎಸ್ ಸಮೀಕ್ಷೆಯು ಬಹಿರಂಗೊಳಿಸಿದೆ. ಯುವ ಭಾರತೀಯರ ವೃತ್ತಿ ಆಕಾಂಕ್ಷೆಗಳು,ಉದ್ಯೋಗ ಆದ್ಯತೆಗಳು ಮತ್ತು ನಿರೀಕ್ಷೆಗಳನ್ನು ವಿಶ್ಲೇಷಿಸಲು ಈ ಸಮೀಕ್ಷೆಯನ್ನು ನಡೆಸಲಾಗಿತ್ತು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago