BREAKING NEWS

2022ರಲ್ಲಿ ಭಾರತದಲ್ಲಿ ಯುವಜನರ ನಿರುದ್ಯೋಗ ದರ ನೆರೆದೇಶಗಳಿಗಿಂತ ಹೆಚ್ಚಿತ್ತು: ವಿಶ್ವಬ್ಯಾಂಕ್ ವರದಿ

ನವದೆಹಲಿ : ಕಳೆದ ವರ್ಷ ಭಾರತದಲ್ಲಿ ಯುವಜನರ ನಿರುದ್ಯೋಗ ದರವು ಶೇ.23.22ರಷ್ಟಿದ್ದು,ಇದು ನೆರೆದೇಶಗಳಾದ ಪಾಕಿಸ್ತಾನ (ಶೇ.11.3),ಬಾಂಗ್ಲಾದೇಶ (ಶೇ.12.9) ಮತ್ತು ಭೂತಾನ (ಶೇ.14.4)ಗಿಂತ ಅಧಿಕವಾಗಿತ್ತು ಎಂದು ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 2022ರಲ್ಲಿ ನಿರುದ್ಯೋಗ ದರವು ಚೀನಾದಲ್ಲಿ ಶೇ.13.2,ಸಿರಿಯಾದಲ್ಲಿ ಶೇ.22.1,ಇಂಡೋನೇಶ್ಯಾದಲ್ಲಿ ಶೇ.13,ಮಲೇಶ್ಯಾದಲ್ಲಿ ಶೇ.11.7,ವಿಯೆಟ್ನಾಮ್ನಲ್ಲಿ ಶೇ.7.4,ದಕ್ಷಿಣ ಕೊರಿಯಾದಲ್ಲಿ ಶೇ.6.9 ಮತ್ತು ಸಿಂಗಪುರದಲ್ಲಿ ಶೇ.6.1ರಷ್ಟಿತ್ತು.

ವರದಿಯು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯಿಂದ ದತ್ತಾಂಶಗಳನ್ನು ಪಡೆದುಕೊಂಡಿದೆ.

ಯುವಜನರ ನಿರುದ್ಯೋಗ ದರವು 15ರಿಂದ 24 ವರ್ಷ ವಯೋಮಾನದ, ಉದ್ಯೋಗವಿಲ್ಲದ ಆದರೆ ಉದ್ಯೋಗಕ್ಕಾಗಿ ಸಕ್ರಿಯ ಹುಡುಕಾಟದಲ್ಲಿರುವವರನ್ನು ಸೂಚಿಸುತ್ತದೆ.

15ರಿಂದ 34 ವರ್ಷ ವಯೋಮಾನದ ಸುಮಾರು ಶೇ.36ರಷ್ಟು ಭಾರತೀಯರು ದೇಶದಲ್ಲಿ ಯುವ ನಿರುದ್ಯೋಗವು ಅತ್ಯಂತ ದೊಡ್ಡ ಸಮಸ್ಯೆಯಾಗಿದೆ ಎಂದು ನಂಬಿದ್ದಾರೆ ಎಂದು ಲೋಕನೀತಿ-ಸಿಡಿಎಸ್ ಸಮೀಕ್ಷೆಯು ಬಹಿರಂಗೊಳಿಸಿದೆ. ಯುವ ಭಾರತೀಯರ ವೃತ್ತಿ ಆಕಾಂಕ್ಷೆಗಳು,ಉದ್ಯೋಗ ಆದ್ಯತೆಗಳು ಮತ್ತು ನಿರೀಕ್ಷೆಗಳನ್ನು ವಿಶ್ಲೇಷಿಸಲು ಈ ಸಮೀಕ್ಷೆಯನ್ನು ನಡೆಸಲಾಗಿತ್ತು.

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

4 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

5 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

5 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

5 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

6 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

6 hours ago