BREAKING NEWS

2022ರಲ್ಲಿ ಭಾರತದಲ್ಲಿ ಯುವಜನರ ನಿರುದ್ಯೋಗ ದರ ನೆರೆದೇಶಗಳಿಗಿಂತ ಹೆಚ್ಚಿತ್ತು: ವಿಶ್ವಬ್ಯಾಂಕ್ ವರದಿ

ನವದೆಹಲಿ : ಕಳೆದ ವರ್ಷ ಭಾರತದಲ್ಲಿ ಯುವಜನರ ನಿರುದ್ಯೋಗ ದರವು ಶೇ.23.22ರಷ್ಟಿದ್ದು,ಇದು ನೆರೆದೇಶಗಳಾದ ಪಾಕಿಸ್ತಾನ (ಶೇ.11.3),ಬಾಂಗ್ಲಾದೇಶ (ಶೇ.12.9) ಮತ್ತು ಭೂತಾನ (ಶೇ.14.4)ಗಿಂತ ಅಧಿಕವಾಗಿತ್ತು ಎಂದು ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 2022ರಲ್ಲಿ ನಿರುದ್ಯೋಗ ದರವು ಚೀನಾದಲ್ಲಿ ಶೇ.13.2,ಸಿರಿಯಾದಲ್ಲಿ ಶೇ.22.1,ಇಂಡೋನೇಶ್ಯಾದಲ್ಲಿ ಶೇ.13,ಮಲೇಶ್ಯಾದಲ್ಲಿ ಶೇ.11.7,ವಿಯೆಟ್ನಾಮ್ನಲ್ಲಿ ಶೇ.7.4,ದಕ್ಷಿಣ ಕೊರಿಯಾದಲ್ಲಿ ಶೇ.6.9 ಮತ್ತು ಸಿಂಗಪುರದಲ್ಲಿ ಶೇ.6.1ರಷ್ಟಿತ್ತು.

ವರದಿಯು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯಿಂದ ದತ್ತಾಂಶಗಳನ್ನು ಪಡೆದುಕೊಂಡಿದೆ.

ಯುವಜನರ ನಿರುದ್ಯೋಗ ದರವು 15ರಿಂದ 24 ವರ್ಷ ವಯೋಮಾನದ, ಉದ್ಯೋಗವಿಲ್ಲದ ಆದರೆ ಉದ್ಯೋಗಕ್ಕಾಗಿ ಸಕ್ರಿಯ ಹುಡುಕಾಟದಲ್ಲಿರುವವರನ್ನು ಸೂಚಿಸುತ್ತದೆ.

15ರಿಂದ 34 ವರ್ಷ ವಯೋಮಾನದ ಸುಮಾರು ಶೇ.36ರಷ್ಟು ಭಾರತೀಯರು ದೇಶದಲ್ಲಿ ಯುವ ನಿರುದ್ಯೋಗವು ಅತ್ಯಂತ ದೊಡ್ಡ ಸಮಸ್ಯೆಯಾಗಿದೆ ಎಂದು ನಂಬಿದ್ದಾರೆ ಎಂದು ಲೋಕನೀತಿ-ಸಿಡಿಎಸ್ ಸಮೀಕ್ಷೆಯು ಬಹಿರಂಗೊಳಿಸಿದೆ. ಯುವ ಭಾರತೀಯರ ವೃತ್ತಿ ಆಕಾಂಕ್ಷೆಗಳು,ಉದ್ಯೋಗ ಆದ್ಯತೆಗಳು ಮತ್ತು ನಿರೀಕ್ಷೆಗಳನ್ನು ವಿಶ್ಲೇಷಿಸಲು ಈ ಸಮೀಕ್ಷೆಯನ್ನು ನಡೆಸಲಾಗಿತ್ತು.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago