ನವದೆಹಲಿ : ಕಳೆದ ವರ್ಷ ಭಾರತದಲ್ಲಿ ಯುವಜನರ ನಿರುದ್ಯೋಗ ದರವು ಶೇ.23.22ರಷ್ಟಿದ್ದು,ಇದು ನೆರೆದೇಶಗಳಾದ ಪಾಕಿಸ್ತಾನ (ಶೇ.11.3),ಬಾಂಗ್ಲಾದೇಶ (ಶೇ.12.9) ಮತ್ತು ಭೂತಾನ (ಶೇ.14.4)ಗಿಂತ ಅಧಿಕವಾಗಿತ್ತು ಎಂದು ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ.
ವರದಿಯ ಪ್ರಕಾರ 2022ರಲ್ಲಿ ನಿರುದ್ಯೋಗ ದರವು ಚೀನಾದಲ್ಲಿ ಶೇ.13.2,ಸಿರಿಯಾದಲ್ಲಿ ಶೇ.22.1,ಇಂಡೋನೇಶ್ಯಾದಲ್ಲಿ ಶೇ.13,ಮಲೇಶ್ಯಾದಲ್ಲಿ ಶೇ.11.7,ವಿಯೆಟ್ನಾಮ್ನಲ್ಲಿ ಶೇ.7.4,ದಕ್ಷಿಣ ಕೊರಿಯಾದಲ್ಲಿ ಶೇ.6.9 ಮತ್ತು ಸಿಂಗಪುರದಲ್ಲಿ ಶೇ.6.1ರಷ್ಟಿತ್ತು.
ವರದಿಯು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯಿಂದ ದತ್ತಾಂಶಗಳನ್ನು ಪಡೆದುಕೊಂಡಿದೆ.
ಯುವಜನರ ನಿರುದ್ಯೋಗ ದರವು 15ರಿಂದ 24 ವರ್ಷ ವಯೋಮಾನದ, ಉದ್ಯೋಗವಿಲ್ಲದ ಆದರೆ ಉದ್ಯೋಗಕ್ಕಾಗಿ ಸಕ್ರಿಯ ಹುಡುಕಾಟದಲ್ಲಿರುವವರನ್ನು ಸೂಚಿಸುತ್ತದೆ.
15ರಿಂದ 34 ವರ್ಷ ವಯೋಮಾನದ ಸುಮಾರು ಶೇ.36ರಷ್ಟು ಭಾರತೀಯರು ದೇಶದಲ್ಲಿ ಯುವ ನಿರುದ್ಯೋಗವು ಅತ್ಯಂತ ದೊಡ್ಡ ಸಮಸ್ಯೆಯಾಗಿದೆ ಎಂದು ನಂಬಿದ್ದಾರೆ ಎಂದು ಲೋಕನೀತಿ-ಸಿಡಿಎಸ್ ಸಮೀಕ್ಷೆಯು ಬಹಿರಂಗೊಳಿಸಿದೆ. ಯುವ ಭಾರತೀಯರ ವೃತ್ತಿ ಆಕಾಂಕ್ಷೆಗಳು,ಉದ್ಯೋಗ ಆದ್ಯತೆಗಳು ಮತ್ತು ನಿರೀಕ್ಷೆಗಳನ್ನು ವಿಶ್ಲೇಷಿಸಲು ಈ ಸಮೀಕ್ಷೆಯನ್ನು ನಡೆಸಲಾಗಿತ್ತು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…